Homeಮುಖಪುಟಉನ್ನಾವ್: ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ, ಪೊಲೀಸ್ ಸಿಬ್ಬಂದಿ ಮೇಲೆ FIR

ಉನ್ನಾವ್: ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ, ಪೊಲೀಸ್ ಸಿಬ್ಬಂದಿ ಮೇಲೆ FIR

ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ರೈಲ್ವೆ ಕ್ರಾಸಿಂಗ್ ಬಳಿ ಸ್ಥಳೀಯ ಪತ್ರಕರ್ತ ಸೂರಜ್ ಪಾಂಡೆ ಶವ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದ್ದು, ಮಹಿಳಾ ಸಬ್ ಇನ್ಸ್‌ಪೆಕ್ಟರ್ ಮತ್ತು ಪುರುಷ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ರಕರ್ತ ಸೂರಜ್ ಪಾಂಡೆ ತಾಯಿ ಲಕ್ಷ್ಮಿ ದೇವಿ, ಮಹಿಳಾ ಇನ್ಸ್‌ಪೆಕ್ಟರ್ ಸುನೀತಾ ಚೌರಾಸಿಯಾ ಮತ್ತು ಕಾನ್‌ಸ್ಟೆಬಲ್ ಅಮರ್ ಸಿಂಗ್ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

‘’ಅವನನ್ನು ಕೊಲೆ ಮಾಡಲಾಗಿದೆ’’ ಎಂದು ಸೂರಜ್ ಪಾಂಡೆಯ ಚಿಕ್ಕಪ್ಪ ಹೇಳಿದ್ದಾರೆ. “ಯಾರೋ ಅವನನ್ನು ಎಲ್ಲೋ ಕರೆದುಕೊಂಡು ಹೋಗಲು ಬಂದಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ, ಆತನನ್ನು ಕರೆದೊಯ್ಯುವ ವ್ಯಕ್ತಿ, ಕೊಲೆ ಮಾಡಿದ ವ್ಯಕ್ತಿ ಯಾರು ಎಂದು ತಿಳಿದುಬರುತ್ತದೆ ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸೂರಜ್ ಪಾಂಡೆಗೆ ಇಬ್ಬರು ಬೆದರಿಕೆ ಹಾಕಿದ್ದಾರೆ ಮತ್ತು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದ ನಂತರ, ಮಹಿಳಾ ಎಸ್‌ಐ ಸುನೀತಾ ಚೌರಾಶಿಯಾ ಮತ್ತು ಆಕೆಯ ಚಾಲಕ ಕಾನ್‌ಸ್ಟೆಬಲ್ ಅಮರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಉನ್ನಾವ್ ಎಸ್‌ಪಿ ಸುರೇಶರಾವ್ ಎ. ಕುಲಕರ್ಣಿ ತಿಳಿಸಿದ್ದಾರೆ. ಜೊತೆಗೆ ಎಸ್‌ಐ ಪತ್ರಕರ್ತರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಕುಲಕರ್ಣಿ ತಿಳಿಸಿದ್ದಾರೆ.

ಇದನ್ನೂ ಓದಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಆದರೂ, ಮೇಲ್ನೋಟಕ್ಕೆ ಇದು ಆತ್ಮಹತ್ಯೆಯ ಪ್ರಕರಣವೆಂದು ತೋರುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಶವ ಮರಣೋತ್ತರ ವರದಿಯಲ್ಲಿ ಕಂಡುಬರುವ ಗಾಯಗಳು ರೈಲು ಅಪಘಾತದಲ್ಲಿ ಉಂಟಾಗಿರುವಂತಿವೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಲಲಿತ್‌ಪುರದ ಗ್ರಾಮ ಪ್ರಧಾನ್ ಅವರ ಕುಟುಂಬವು ನರೇಗಾ ಕೆಲಸಕ್ಕೆ ಕಾರ್ಮಿಕರನ್ನು ನೇಮಿಸಿಕೊಳ್ಳುವ ಬದಲು ಅಕ್ರಮವಾಗಿ ಯಂತ್ರಗಳನ್ನು ಬಳಸುತ್ತಿರುವ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಲಲಿತ್‌ಪುರದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.

ನ್ಯೂಸ್ ಪೋರ್ಟಲ್ ಬುಂದೇಲ್‌ಖಂಡ್ ಟೈಮ್ಸ್ ಟಿವಿಯನ್ನು ನಡೆಸುತ್ತಿರುವ ಮತ್ತು ಇತರ ಪತ್ರಿಕೆಗಳಿಗೆ ಸ್ಟ್ರಿಂಜರ್ ಆಗಿ ಕೆಲಸ ಮಾಡುತ್ತಿರುವ ವಿನಯ್ ತಿವಾರಿ ಅವರ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆಯಿಂದ ಅವರ ಕೈ ಮತ್ತು ಕಾಲಿನಲ್ಲಿ ಮುರಿತ ಉಂಟಾಗಿದೆ. ಜೊತೆಗೆ ದೇಹದ ತುಂಬಾ ಮೂಗೇಟುಗಳು ಉಳಿದಿವೆ.

ಹಲ್ಲೆ ಮತ್ತು ಕೊಲೆ ಯತ್ನಕ್ಕಾಗಿ ಪೊಲೀಸರು ಸ್ಥಳೀಯ ಗ್ರಾಮ ಪ್ರಧಾನ್, ಅವರ ಪತಿ ಮತ್ತು ಮೂವರು ಗಂಡು ಮಕ್ಕಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...