Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...