Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...