Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...