Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...