Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...