Homeಮುಖಪುಟಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಪ್ರತಿಪಕ್ಷಗಳಿಂದ ಖಂಡನೆ

ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಪ್ರತಿಪಕ್ಷಗಳಿಂದ ಖಂಡನೆ

- Advertisement -
- Advertisement -

ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ದಾಳಿ ನಡೆಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ಪತ್ರಕರ್ತನ ಮೇಲಿನ ದಾಳಿಗೆ ಪ್ರತಿಪಕ್ಷಗಳು ವ್ಯಾಪಕ ಖಂಡನೆಯನ್ನು ವ್ಯಕ್ತಪಡಿಸಿದೆ.

ಎಲ್‌ಕೆ ಅಡ್ವಾಣಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ ಪ್ರಶಸ್ತಿ’ ನೀಡಿದ ನಂತರ ನಿಖಿಲ್ ವಾಗ್ಲೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್‌ಕೆ ಅಡ್ವಾಣಿ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಿಂಘಾಡ್ ರಸ್ತೆ ಪ್ರದೇಶದಲ್ಲಿ ರಾಷ್ಟ್ರ ಸೇವಾದಳ ಆಯೋಜಿಸಿದ್ದ ‘ನಿರ್ಭಯ್ ಬಾನೋ’ ಕಾರ್ಯಕ್ರಮಕ್ಕೆ ನಿಖಿಲ್ ವಾಗ್ಲೆ, ಅಸೀಮ್ ಸರೋದೆ ಮತ್ತು ವಿಶ್ವಂಭರ ಚೌಧರಿ ಪೊಲೀಸ್ ರಕ್ಷಣೆಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಶಾಯಿ ಎರಚಿ ಕಾರಿನ ವಿಂಡ್‌ಸ್ಕ್ರೀನ್ ಒಡೆದು ಹಾಕಿದ್ದಾರೆ.

‘ನಿರ್ಭಯ್ ಬಾನೊ’ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುವಂತೆ ಪುಣೆ ಬಿಜೆಪಿ ಘಟಕ ಪೊಲೀಸರಿಗೆ ಮನವಿ ಮಾಡಿತ್ತು. ಶಿವಸೇನೆಯ ಪುಣೆ ನಗರಾಧ್ಯಕ್ಷ ಪ್ರಮೋದ್ ಭಂಗಿರೆ ಅವರು ಈ ಕಾರ್ಯಕ್ರಮವನ್ನು ನಾವು ವಿರೋಧಿಸುತ್ತಿಲ್ಲ. ಆದರೆ ವಾಗ್ಲೆ ಅವರ ಭಾಗವಹಿಸುವಿಕೆಯನ್ನು ನಾವು ವಿರೋಧಿಸುತ್ತಿದ್ದೇವೆ ಎಂದು ಹೇಳಿದ್ದರು.

ಖಂಡೋಜಿ ಬಾಬಾ ಚೌಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ನಿಖಿಲ್ ವಾಗ್ಲೆ ಅವರ ಕಾರನ್ನು ಗುಂಪುಗೂಡಿ  ಧ್ವಂಸಗೊಳಿಸುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾಳಿಯಿಂದ ಕಾರಿನ ವಿಂಡ್‌ಸ್ಕ್ರೀನ್ ಮತ್ತು ಸೈಡ್ ಪ್ಯಾನ್‌ಗಳಿಗೆ ಹಾನಿಯಾಗಿದೆ. ನಿಖಿಲ್ ವಾಗ್ಲೆ ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ತೆರಳುವಲ್ಲಿ ಯಶಸ್ವಿಯಾಗಿದ್ದಾರೆ.

‘ನಿರ್ಭಯ್ ಬಾನೋ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ವಾಗ್ಲೆ, ನನ್ನ ಮೇಲೆ ಹಲ್ಲೆ ನಡೆಸಿದ ಎಲ್ಲರನ್ನೂ ನಾನು ಕ್ಷಮಿಸುತ್ತೇನೆ. ಈ ಹಿಂದೆ ಆರು ಬಾರಿ ನನ್ನ ಮೇಲೆ ದಾಳಿ ಮಾಡಲಾಗಿದೆ ಮತ್ತು ಇದು ಏಳನೆಯದು ಎಂದು ಹೇಳಿದ್ದಾರೆ.

ನಿಖಿಲ್ ವಾಗ್ಲೆ ವಿರುದ್ಧ ಎಫ್‌ಐಆರ್‌

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ನಿಖಿಲ್ ವಾಗ್ಲೆ (64) ವಿರುದ್ಧ  ಬಿಜೆಪಿಯ ಹಿರಿಯ ನಾಯಕ ಸುನೀಲ್ ದೇವಧರ್ ಪುಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ನಿಖಿಲ್ ವಾಗ್ಲೆ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 (ಮಾನನಷ್ಟ) ಮತ್ತು 505ರಡಿಯಲ್ಲಿ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರತಿಪಕ್ಷಗಳಿಂದ ಟೀಕೆ:

ಶುಕ್ರವಾರ ಸಂಜೆ ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ ನಂತರ ವಿರೋಧ ಪಕ್ಷಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಘಟನೆಗೆ ಕಟುವಾಗಿ ಪ್ರತಿಕ್ರಿಯಿಸಿದ ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವುತ್, ಹಲವಾರು ಮಹಾ ವಿಕಾಸ್ ಅಘಾಡಿ ಮಹಿಳಾ ಕಾರ್ಯಕರ್ತರನ್ನು ಬಿಜೆಪಿ ಗೂಂಡಾಗಳು ಥಳಿಸಿದ್ದಾರೆ ಮತ್ತು ಅವರ ಮೇಲೆ ಮೊಟ್ಟೆ, ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆಯಲಾಗಿದೆ. ಘಟನೆ ನಡೆಯುವ ವೇಳೆ ಪುಣೆ ಪೊಲೀಸರು ಮೂಖಪ್ರೇಕ್ಷಕರಾಗಿದ್ದರು. ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿಗೆ ಮಸಿ, ಮೊಟ್ಟೆ ಎಸೆದು ಕಾರು ಒಡೆದಿದ್ದಾರೆ. ಪುಣೆಯಲ್ಲಿ ಬಿಜೆಪಿಯಿಂದ ಪ್ರಜಾಪ್ರಭುತ್ವವನ್ನು ಕೊಂದು ಹಾಕುವ ಹುನ್ನಾರ ನಡೆದಿದೆ. ದೇವೇಂದ್ರ ಫಡ್ನವೀಸ್‌ಗೆ ನಾಚಿಕೆಯಾಗಬೇಕು, ಮಹಾರಾಷ್ಟ್ರದ ಅಸಹಾಯಕ ಹೆಣ್ಣುಮಕ್ಕಳಿಗೆ ಹಾನಿ ಮಾಡಲು ಮತ್ತು ಗಾಯಗೊಳಿಸಲು ನಿಮ್ಮ ಸಿಬ್ಬಂದಿಗೆ ನೀವು ಆದೇಶ ನೀಡುತ್ತಿದ್ದೀರಿ, ಮಹಾರಾಷ್ಟ್ರವು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಂಜಯ್ ರಾವುತ್ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ಪುಣೆ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಮ್ಮ ಮಾಜಿ ಕಾರ್ಪೊರೇಟರ್ ಅಭಿಷೇಕ್ ಘೋಸಲ್ಕರ್ ಅವರ ಅಕಾಲಿಕ ಮತ್ತು ದುರದೃಷ್ಟಕರ ಹತ್ಯೆಯಾಗಿ 24 ಗಂಟೆ ಕಳೆದಿಲ್ಲ. ಈಗ ಬಿಜೆಪಿಯನ್ನು ಟೀಕಿಸಿದ್ದಕ್ಕೆ ಈ ದಾಳಿಯನ್ನು ಮಾಡಲಾಗಿದೆ, ಇದು ಖಂಡನೀಯ ಎಂದು ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ. ಇದಲ್ಲದೆ ಪ್ರಿಯಾಂಕಾ ಚತುರ್ವೇದಿ ಅವರು ಮುಂಬೈನಲ್ಲಿ ತಮ್ಮ ಪಕ್ಷದ ನಾಯಕ ಅಭಿಷೇಕ್ ಘೋಸಲ್ಕರ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಅಮಿತ್ ಶಾಗೆ ಬರೆದ ಪತ್ರದಲ್ಲಿ ಥಾಣೆ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರು ಪೊಲೀಸ್ ಠಾಣೆಯೊಳಗೆ ಗುಂಡು ಹಾರಿಸಿದ ಘಟನೆಯನ್ನು ಕೂಡ ಉಲ್ಲೇಖಿಸಿದ್ದಾರೆ.

ಎನ್‌ಸಿಪಿಯ ಶರದ್ ಪವಾರ್ ಬಣದ ಸುಪ್ರಿಯಾ ಸುಳೆ ಅವರು ನಿಖಿಲ್ ವಾಗ್ಲೆ ಅವರ ಮೇಲಿನ ದಾಳಿಯನ್ನು “ಬಲವಾಗಿ” ಖಂಡಿಸುವುದಾಗಿ ಹೇಳಿದ್ದಾರೆ. ನಿಖಿಲ್ ವಾಗ್ಲೆ “ಸತ್ಯದ ಧ್ವನಿ ಮತ್ತು ಪತ್ರಿಕೋದ್ಯಮದ ದಾರಿದೀಪ” ಎಂದು ಬಣ್ಣಿಸಿದ್ದಾರೆ. ಇದು ಕೇವಲ ವ್ಯಕ್ತಿಯ ಮೇಲಿನ ಹಲ್ಲೆಯಲ್ಲ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ | ದೇಶದಲ್ಲಿ 96.88 ಕೋಟಿ ಮತದಾರರು : ಚುನಾವಣಾ ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...