Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ ರಾಣಾ ಅಯೂಬ್‌ ಅವರ ಮೇಲೆ ದಾಳಿಗೆ ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಆಗಸ್ಟ್ 31 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನವಾಗಿದ್ದಕ್ಕೆ ಸಂಭ್ರಮಿಸಿ ಪತ್ರಕರ್ತೆ ರಾಣಾ ಅಯೂಬ್ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ, ಪ್ರಣಬ್ ಮುಖರ್ಜಿ ಅವರ ಫೋಟೋ ಹಾಕಿ “ಹುತಾತ್ಮ ಅಫ್ಜಲ್ ಗುರುವಿನ ಅರ್ಜಿಯನ್ನು ನಿರಾಕರಿಸಿದವರು ಇಂದು ಸತ್ತು ಹೋದರು, ಇಂದು ಅಫ್ಜಲ್ ಗುರುವಿಗೆ ಶಾಂತಿ ಸಿಗುತ್ತದೆ” ಎಂದು ಬರೆದಿದೆ.

ಪ್ರಣಬ್ ಮುಖರ್ಜಿ ಭಾರತದ ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ, 2001 ರ ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುವಿನ ಕ್ಷಮಾಪನಾ ಅರ್ಜಿಯನ್ನು ತಿರಸ್ಕರಿಸಿದ್ದರು.

ಮತ್ತಷ್ಟು ಫ್ಯಾಕ್ಟ್‌ಚೆಕ್ ಓದಲು ಇಲ್ಲಿ ಕ್ಲಿಕ್‌ ಮಾಡಿ

ಈ ಸ್ಕ್ರೀನ್‌ಶಾಟ್ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಜಿಹಾದಿ ಮನಸ್ಸು ಹೇಗೆ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಆರ್ಕೈವ್

ಫ್ಯಾಕ್ಟ್‌‌ಚೆಕ್‌‌

ರಾಣಾ ಅಯೂಬ್ ಅವರ ಟ್ವಿಟರ್ ಟೈಮ್‌ಲೈನ್‌ನಲ್ಲಿ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಯಾವುದೆ ಟ್ವೀಟ್‌‌ ಇಲ್ಲ. ಅಷ್ಟೇ ಅಲ್ಲದೆ ಈ ವೈರಲ್ ಸ್ಕ್ರೀನ್‌ಶಾಟ್‌ ಅನ್ನು ಸರಿಯಾಗಿ ಗಮನಿಸಿದೆರೆ ಅದು ನಕಲಿ ಟ್ವೀಟ್ (ಎಡಿಟ್ ಮಾಡಲಾದ) ಎಂದು ಗುರುತಿಸಬಹುದು. ಮುಖ್ಯವಾಗಿ ಈ ವೈರಲ್ ಟ್ವೀಟ್‌‌ನ ಸ್ಕ್ರೀನ್‌ಶಾರ್ಟ್‌ನಲ್ಲಿ ನಾವು ನಾಲ್ಕು ತಪ್ಪುಗಳನ್ನು ಗುರುತಿಸಬಹುದು.

ವೈರಲ್ ಟ್ವೀಟ್ (ಎಡ) ಮತ್ತು ರಾಣಾ ಅಯ್ಯುಬ್ (ಬಲ) ಅವರ ಮತ್ತೊಂದು ಟ್ವೀಟ್‌ನ ಹೋಲಿಕೆ ಹೋಲಿಕೆ. (ಫೋಟೋ: ದಿ ಕ್ವಿಂಟ್‌ )
  • ವೈರಲ್ ಟ್ವೀಟ್‌ನಲ್ಲಿ ಬಳಕೆದಾರ ಹೆಸರು ಮತ್ತು ಬರಹದ ನಡುವಿನ ಸ್ಥಳವು ಸಾಮಾನ್ಯ ಟ್ವೀಟ್‌ನಲ್ಲಿ ಕಾಣುವುದಕ್ಕಿಂತ ಹೆಚ್ಚಾಗಿದೆ.
  • ವೈರಲ್ ಟ್ವೀಟ್‌ನಲ್ಲಿ ಡೇಟ್‌ಲೈನ್ ಇಲ್ಲ.
  • ಟ್ವೀಟ್‌ಗಳಲ್ಲಿ ಸಾಮಾನ್ಯವಾಗಿ ಕಾಣುವಂತೆ ‘ಕಾಮೆಂಟ್‌’, ‘ರಿಟ್ವೀಟ್’ ಮತ್ತು ‘ಲೈಕ್’ ಐಕಾನ್‌ಗಳು ವೈರಲ್ ಟ್ವೀಟ್‌ನಲ್ಲಿ ಎಡಗಡೆಗೆ ಹೊಂದಿಕೊಂಡಿದೆ.
  • ವೈರಲ್ ಟ್ವೀಟ್ ‘ಶೇರ್‌’ ಆಯ್ಕೆಯ ಐಕಾನ್‌ ಹೊಂದಿಲ್ಲ.

ಇದನ್ನೂಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ.

ಅಷ್ಟೇ ಅಲ್ಲದೆ ಸ್ವತಃ ರಾಣಾ ಅಯೂಬ್ ಅವರು ಕೂಡಾ ಈ ಟ್ವೀಟ್ ಅನ್ನು ನಕಲಿ ಎಂದು ಕರೆದಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ, ನನ್ನ ಮೇಲೆ ದಾಳಿ ಮಾಡಲು ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸುತ್ತಿದ್ದಾರೆ” ಎಂದು ಅವರು ಟ್ವಿಟ್ಟ್‌ರ್‌ ಇಂಡಿಯಾಗೆ ಟ್ಯಾಗ್‌ ಮಾಡಿ ದೂರು ನೀಡಿದ್ದಾರೆ. ಆದರೆ ಮಹಿಳೆಯು ಅದನ್ನು ಡಿಲಿಟ್ ಮಾಡಿದ್ದಾರೆ. ಅವರು ಹಾಕಿರುವ ಟ್ವೀಟ್‌ನ ಆರ್ಕೈವ್ ಇಲ್ಲಿದೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಸ್ಕ್ರೀನ್‌‌ಶಾರ್ಟ್ ನಕಲಿ ಎಂದು ತಿಳಿದುಕೊಳ್ಳಬಹುದು.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ:  ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...