Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ ರಾಣಾ ಅಯೂಬ್‌ ಅವರ ಮೇಲೆ ದಾಳಿಗೆ ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಆಗಸ್ಟ್ 31 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನವಾಗಿದ್ದಕ್ಕೆ ಸಂಭ್ರಮಿಸಿ ಪತ್ರಕರ್ತೆ ರಾಣಾ ಅಯೂಬ್ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ, ಪ್ರಣಬ್ ಮುಖರ್ಜಿ ಅವರ ಫೋಟೋ ಹಾಕಿ “ಹುತಾತ್ಮ ಅಫ್ಜಲ್ ಗುರುವಿನ ಅರ್ಜಿಯನ್ನು ನಿರಾಕರಿಸಿದವರು ಇಂದು ಸತ್ತು ಹೋದರು, ಇಂದು ಅಫ್ಜಲ್ ಗುರುವಿಗೆ ಶಾಂತಿ ಸಿಗುತ್ತದೆ” ಎಂದು ಬರೆದಿದೆ.

ಪ್ರಣಬ್ ಮುಖರ್ಜಿ ಭಾರತದ ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ, 2001 ರ ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುವಿನ ಕ್ಷಮಾಪನಾ ಅರ್ಜಿಯನ್ನು ತಿರಸ್ಕರಿಸಿದ್ದರು.

ಮತ್ತಷ್ಟು ಫ್ಯಾಕ್ಟ್‌ಚೆಕ್ ಓದಲು ಇಲ್ಲಿ ಕ್ಲಿಕ್‌ ಮಾಡಿ

ಈ ಸ್ಕ್ರೀನ್‌ಶಾಟ್ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಜಿಹಾದಿ ಮನಸ್ಸು ಹೇಗೆ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಆರ್ಕೈವ್

ಫ್ಯಾಕ್ಟ್‌‌ಚೆಕ್‌‌

ರಾಣಾ ಅಯೂಬ್ ಅವರ ಟ್ವಿಟರ್ ಟೈಮ್‌ಲೈನ್‌ನಲ್ಲಿ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಯಾವುದೆ ಟ್ವೀಟ್‌‌ ಇಲ್ಲ. ಅಷ್ಟೇ ಅಲ್ಲದೆ ಈ ವೈರಲ್ ಸ್ಕ್ರೀನ್‌ಶಾಟ್‌ ಅನ್ನು ಸರಿಯಾಗಿ ಗಮನಿಸಿದೆರೆ ಅದು ನಕಲಿ ಟ್ವೀಟ್ (ಎಡಿಟ್ ಮಾಡಲಾದ) ಎಂದು ಗುರುತಿಸಬಹುದು. ಮುಖ್ಯವಾಗಿ ಈ ವೈರಲ್ ಟ್ವೀಟ್‌‌ನ ಸ್ಕ್ರೀನ್‌ಶಾರ್ಟ್‌ನಲ್ಲಿ ನಾವು ನಾಲ್ಕು ತಪ್ಪುಗಳನ್ನು ಗುರುತಿಸಬಹುದು.

ವೈರಲ್ ಟ್ವೀಟ್ (ಎಡ) ಮತ್ತು ರಾಣಾ ಅಯ್ಯುಬ್ (ಬಲ) ಅವರ ಮತ್ತೊಂದು ಟ್ವೀಟ್‌ನ ಹೋಲಿಕೆ ಹೋಲಿಕೆ. (ಫೋಟೋ: ದಿ ಕ್ವಿಂಟ್‌ )
  • ವೈರಲ್ ಟ್ವೀಟ್‌ನಲ್ಲಿ ಬಳಕೆದಾರ ಹೆಸರು ಮತ್ತು ಬರಹದ ನಡುವಿನ ಸ್ಥಳವು ಸಾಮಾನ್ಯ ಟ್ವೀಟ್‌ನಲ್ಲಿ ಕಾಣುವುದಕ್ಕಿಂತ ಹೆಚ್ಚಾಗಿದೆ.
  • ವೈರಲ್ ಟ್ವೀಟ್‌ನಲ್ಲಿ ಡೇಟ್‌ಲೈನ್ ಇಲ್ಲ.
  • ಟ್ವೀಟ್‌ಗಳಲ್ಲಿ ಸಾಮಾನ್ಯವಾಗಿ ಕಾಣುವಂತೆ ‘ಕಾಮೆಂಟ್‌’, ‘ರಿಟ್ವೀಟ್’ ಮತ್ತು ‘ಲೈಕ್’ ಐಕಾನ್‌ಗಳು ವೈರಲ್ ಟ್ವೀಟ್‌ನಲ್ಲಿ ಎಡಗಡೆಗೆ ಹೊಂದಿಕೊಂಡಿದೆ.
  • ವೈರಲ್ ಟ್ವೀಟ್ ‘ಶೇರ್‌’ ಆಯ್ಕೆಯ ಐಕಾನ್‌ ಹೊಂದಿಲ್ಲ.

ಇದನ್ನೂಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ.

ಅಷ್ಟೇ ಅಲ್ಲದೆ ಸ್ವತಃ ರಾಣಾ ಅಯೂಬ್ ಅವರು ಕೂಡಾ ಈ ಟ್ವೀಟ್ ಅನ್ನು ನಕಲಿ ಎಂದು ಕರೆದಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ, ನನ್ನ ಮೇಲೆ ದಾಳಿ ಮಾಡಲು ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸುತ್ತಿದ್ದಾರೆ” ಎಂದು ಅವರು ಟ್ವಿಟ್ಟ್‌ರ್‌ ಇಂಡಿಯಾಗೆ ಟ್ಯಾಗ್‌ ಮಾಡಿ ದೂರು ನೀಡಿದ್ದಾರೆ. ಆದರೆ ಮಹಿಳೆಯು ಅದನ್ನು ಡಿಲಿಟ್ ಮಾಡಿದ್ದಾರೆ. ಅವರು ಹಾಕಿರುವ ಟ್ವೀಟ್‌ನ ಆರ್ಕೈವ್ ಇಲ್ಲಿದೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಸ್ಕ್ರೀನ್‌‌ಶಾರ್ಟ್ ನಕಲಿ ಎಂದು ತಿಳಿದುಕೊಳ್ಳಬಹುದು.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ:  ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...