Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ ರಾಣಾ ಅಯೂಬ್‌ ಅವರ ಮೇಲೆ ದಾಳಿಗೆ ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಆಗಸ್ಟ್ 31 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನವಾಗಿದ್ದಕ್ಕೆ ಸಂಭ್ರಮಿಸಿ ಪತ್ರಕರ್ತೆ ರಾಣಾ ಅಯೂಬ್ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ, ಪ್ರಣಬ್ ಮುಖರ್ಜಿ ಅವರ ಫೋಟೋ ಹಾಕಿ “ಹುತಾತ್ಮ ಅಫ್ಜಲ್ ಗುರುವಿನ ಅರ್ಜಿಯನ್ನು ನಿರಾಕರಿಸಿದವರು ಇಂದು ಸತ್ತು ಹೋದರು, ಇಂದು ಅಫ್ಜಲ್ ಗುರುವಿಗೆ ಶಾಂತಿ ಸಿಗುತ್ತದೆ” ಎಂದು ಬರೆದಿದೆ.

ಪ್ರಣಬ್ ಮುಖರ್ಜಿ ಭಾರತದ ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ, 2001 ರ ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುವಿನ ಕ್ಷಮಾಪನಾ ಅರ್ಜಿಯನ್ನು ತಿರಸ್ಕರಿಸಿದ್ದರು.

ಮತ್ತಷ್ಟು ಫ್ಯಾಕ್ಟ್‌ಚೆಕ್ ಓದಲು ಇಲ್ಲಿ ಕ್ಲಿಕ್‌ ಮಾಡಿ

ಈ ಸ್ಕ್ರೀನ್‌ಶಾಟ್ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಜಿಹಾದಿ ಮನಸ್ಸು ಹೇಗೆ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಆರ್ಕೈವ್

ಫ್ಯಾಕ್ಟ್‌‌ಚೆಕ್‌‌

ರಾಣಾ ಅಯೂಬ್ ಅವರ ಟ್ವಿಟರ್ ಟೈಮ್‌ಲೈನ್‌ನಲ್ಲಿ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಯಾವುದೆ ಟ್ವೀಟ್‌‌ ಇಲ್ಲ. ಅಷ್ಟೇ ಅಲ್ಲದೆ ಈ ವೈರಲ್ ಸ್ಕ್ರೀನ್‌ಶಾಟ್‌ ಅನ್ನು ಸರಿಯಾಗಿ ಗಮನಿಸಿದೆರೆ ಅದು ನಕಲಿ ಟ್ವೀಟ್ (ಎಡಿಟ್ ಮಾಡಲಾದ) ಎಂದು ಗುರುತಿಸಬಹುದು. ಮುಖ್ಯವಾಗಿ ಈ ವೈರಲ್ ಟ್ವೀಟ್‌‌ನ ಸ್ಕ್ರೀನ್‌ಶಾರ್ಟ್‌ನಲ್ಲಿ ನಾವು ನಾಲ್ಕು ತಪ್ಪುಗಳನ್ನು ಗುರುತಿಸಬಹುದು.

ವೈರಲ್ ಟ್ವೀಟ್ (ಎಡ) ಮತ್ತು ರಾಣಾ ಅಯ್ಯುಬ್ (ಬಲ) ಅವರ ಮತ್ತೊಂದು ಟ್ವೀಟ್‌ನ ಹೋಲಿಕೆ ಹೋಲಿಕೆ. (ಫೋಟೋ: ದಿ ಕ್ವಿಂಟ್‌ )
  • ವೈರಲ್ ಟ್ವೀಟ್‌ನಲ್ಲಿ ಬಳಕೆದಾರ ಹೆಸರು ಮತ್ತು ಬರಹದ ನಡುವಿನ ಸ್ಥಳವು ಸಾಮಾನ್ಯ ಟ್ವೀಟ್‌ನಲ್ಲಿ ಕಾಣುವುದಕ್ಕಿಂತ ಹೆಚ್ಚಾಗಿದೆ.
  • ವೈರಲ್ ಟ್ವೀಟ್‌ನಲ್ಲಿ ಡೇಟ್‌ಲೈನ್ ಇಲ್ಲ.
  • ಟ್ವೀಟ್‌ಗಳಲ್ಲಿ ಸಾಮಾನ್ಯವಾಗಿ ಕಾಣುವಂತೆ ‘ಕಾಮೆಂಟ್‌’, ‘ರಿಟ್ವೀಟ್’ ಮತ್ತು ‘ಲೈಕ್’ ಐಕಾನ್‌ಗಳು ವೈರಲ್ ಟ್ವೀಟ್‌ನಲ್ಲಿ ಎಡಗಡೆಗೆ ಹೊಂದಿಕೊಂಡಿದೆ.
  • ವೈರಲ್ ಟ್ವೀಟ್ ‘ಶೇರ್‌’ ಆಯ್ಕೆಯ ಐಕಾನ್‌ ಹೊಂದಿಲ್ಲ.

ಇದನ್ನೂಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ.

ಅಷ್ಟೇ ಅಲ್ಲದೆ ಸ್ವತಃ ರಾಣಾ ಅಯೂಬ್ ಅವರು ಕೂಡಾ ಈ ಟ್ವೀಟ್ ಅನ್ನು ನಕಲಿ ಎಂದು ಕರೆದಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ, ನನ್ನ ಮೇಲೆ ದಾಳಿ ಮಾಡಲು ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸುತ್ತಿದ್ದಾರೆ” ಎಂದು ಅವರು ಟ್ವಿಟ್ಟ್‌ರ್‌ ಇಂಡಿಯಾಗೆ ಟ್ಯಾಗ್‌ ಮಾಡಿ ದೂರು ನೀಡಿದ್ದಾರೆ. ಆದರೆ ಮಹಿಳೆಯು ಅದನ್ನು ಡಿಲಿಟ್ ಮಾಡಿದ್ದಾರೆ. ಅವರು ಹಾಕಿರುವ ಟ್ವೀಟ್‌ನ ಆರ್ಕೈವ್ ಇಲ್ಲಿದೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಸ್ಕ್ರೀನ್‌‌ಶಾರ್ಟ್ ನಕಲಿ ಎಂದು ತಿಳಿದುಕೊಳ್ಳಬಹುದು.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ:  ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...