Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ ರಾಣಾ ಅಯೂಬ್‌ ಅವರ ಮೇಲೆ ದಾಳಿಗೆ ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಆಗಸ್ಟ್ 31 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನವಾಗಿದ್ದಕ್ಕೆ ಸಂಭ್ರಮಿಸಿ ಪತ್ರಕರ್ತೆ ರಾಣಾ ಅಯೂಬ್ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ, ಪ್ರಣಬ್ ಮುಖರ್ಜಿ ಅವರ ಫೋಟೋ ಹಾಕಿ “ಹುತಾತ್ಮ ಅಫ್ಜಲ್ ಗುರುವಿನ ಅರ್ಜಿಯನ್ನು ನಿರಾಕರಿಸಿದವರು ಇಂದು ಸತ್ತು ಹೋದರು, ಇಂದು ಅಫ್ಜಲ್ ಗುರುವಿಗೆ ಶಾಂತಿ ಸಿಗುತ್ತದೆ” ಎಂದು ಬರೆದಿದೆ.

ಪ್ರಣಬ್ ಮುಖರ್ಜಿ ಭಾರತದ ರಾಷ್ಟ್ರಪತಿಯಾಗಿದ್ದ ಅವಧಿಯಲ್ಲಿ, 2001 ರ ಸಂಸತ್ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರುವಿನ ಕ್ಷಮಾಪನಾ ಅರ್ಜಿಯನ್ನು ತಿರಸ್ಕರಿಸಿದ್ದರು.

ಮತ್ತಷ್ಟು ಫ್ಯಾಕ್ಟ್‌ಚೆಕ್ ಓದಲು ಇಲ್ಲಿ ಕ್ಲಿಕ್‌ ಮಾಡಿ

ಈ ಸ್ಕ್ರೀನ್‌ಶಾಟ್ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಜಿಹಾದಿ ಮನಸ್ಸು ಹೇಗೆ ಕಾರ್ಯನಿರ್ವಹಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ಹರಿದಾಡುತ್ತಿದೆ.

ಇದರ ಆರ್ಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ.
ಆರ್ಕೈವ್

ಫ್ಯಾಕ್ಟ್‌‌ಚೆಕ್‌‌

ರಾಣಾ ಅಯೂಬ್ ಅವರ ಟ್ವಿಟರ್ ಟೈಮ್‌ಲೈನ್‌ನಲ್ಲಿ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಯಾವುದೆ ಟ್ವೀಟ್‌‌ ಇಲ್ಲ. ಅಷ್ಟೇ ಅಲ್ಲದೆ ಈ ವೈರಲ್ ಸ್ಕ್ರೀನ್‌ಶಾಟ್‌ ಅನ್ನು ಸರಿಯಾಗಿ ಗಮನಿಸಿದೆರೆ ಅದು ನಕಲಿ ಟ್ವೀಟ್ (ಎಡಿಟ್ ಮಾಡಲಾದ) ಎಂದು ಗುರುತಿಸಬಹುದು. ಮುಖ್ಯವಾಗಿ ಈ ವೈರಲ್ ಟ್ವೀಟ್‌‌ನ ಸ್ಕ್ರೀನ್‌ಶಾರ್ಟ್‌ನಲ್ಲಿ ನಾವು ನಾಲ್ಕು ತಪ್ಪುಗಳನ್ನು ಗುರುತಿಸಬಹುದು.

ವೈರಲ್ ಟ್ವೀಟ್ (ಎಡ) ಮತ್ತು ರಾಣಾ ಅಯ್ಯುಬ್ (ಬಲ) ಅವರ ಮತ್ತೊಂದು ಟ್ವೀಟ್‌ನ ಹೋಲಿಕೆ ಹೋಲಿಕೆ. (ಫೋಟೋ: ದಿ ಕ್ವಿಂಟ್‌ )
  • ವೈರಲ್ ಟ್ವೀಟ್‌ನಲ್ಲಿ ಬಳಕೆದಾರ ಹೆಸರು ಮತ್ತು ಬರಹದ ನಡುವಿನ ಸ್ಥಳವು ಸಾಮಾನ್ಯ ಟ್ವೀಟ್‌ನಲ್ಲಿ ಕಾಣುವುದಕ್ಕಿಂತ ಹೆಚ್ಚಾಗಿದೆ.
  • ವೈರಲ್ ಟ್ವೀಟ್‌ನಲ್ಲಿ ಡೇಟ್‌ಲೈನ್ ಇಲ್ಲ.
  • ಟ್ವೀಟ್‌ಗಳಲ್ಲಿ ಸಾಮಾನ್ಯವಾಗಿ ಕಾಣುವಂತೆ ‘ಕಾಮೆಂಟ್‌’, ‘ರಿಟ್ವೀಟ್’ ಮತ್ತು ‘ಲೈಕ್’ ಐಕಾನ್‌ಗಳು ವೈರಲ್ ಟ್ವೀಟ್‌ನಲ್ಲಿ ಎಡಗಡೆಗೆ ಹೊಂದಿಕೊಂಡಿದೆ.
  • ವೈರಲ್ ಟ್ವೀಟ್ ‘ಶೇರ್‌’ ಆಯ್ಕೆಯ ಐಕಾನ್‌ ಹೊಂದಿಲ್ಲ.

ಇದನ್ನೂಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ.

ಅಷ್ಟೇ ಅಲ್ಲದೆ ಸ್ವತಃ ರಾಣಾ ಅಯೂಬ್ ಅವರು ಕೂಡಾ ಈ ಟ್ವೀಟ್ ಅನ್ನು ನಕಲಿ ಎಂದು ಕರೆದಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಮೋದಿ ಫಾಲೋ ಮಾಡುತ್ತಿರುವ ಜ್ಯೋತ್ಸ್ನಾ ವರ್ಮಾ ಎಂಬ ಮಹಿಳೆ, ನನ್ನ ಮೇಲೆ ದಾಳಿ ಮಾಡಲು ಫೋಟೋಶಾಪ್ ಮಾಡಿದ ನಕಲಿ ಟ್ವೀಟ್‌ನ್ನು ಉಲ್ಲೇಖಿಸುತ್ತಿದ್ದಾರೆ” ಎಂದು ಅವರು ಟ್ವಿಟ್ಟ್‌ರ್‌ ಇಂಡಿಯಾಗೆ ಟ್ಯಾಗ್‌ ಮಾಡಿ ದೂರು ನೀಡಿದ್ದಾರೆ. ಆದರೆ ಮಹಿಳೆಯು ಅದನ್ನು ಡಿಲಿಟ್ ಮಾಡಿದ್ದಾರೆ. ಅವರು ಹಾಕಿರುವ ಟ್ವೀಟ್‌ನ ಆರ್ಕೈವ್ ಇಲ್ಲಿದೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಸ್ಕ್ರೀನ್‌‌ಶಾರ್ಟ್ ನಕಲಿ ಎಂದು ತಿಳಿದುಕೊಳ್ಳಬಹುದು.

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ:  ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...