Homeಚಳವಳಿನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

ನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

- Advertisement -
- Advertisement -

ಜನಪರ ಪತ್ರಕರ್ತ ಎನ್.ಡಿ.ಟಿ.ವಿಯ ರವೀಶ್ ಕುಮಾರ್ ರವರಿಗೆ ‘ಪತ್ರಿಕೋಧ್ಯಮದ ಮೂಲಕ ದನಿಯಿಲ್ಲದವರಿಗೆ ದನಿಯಾದ’ ಸಾಧನೆಗಾಗಿ ಏಷ್ಯಾದ ನೊಬೆಲ್ ಎನಿಸಿಕೊಂಡಿರುವ ಪ್ರತಿಷ್ಟಿತ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಲಭಿಸಿದೆ.

ರವೀಶ್ ಕುಮಾರ್, ಬಿಹಾರದ ಮೊತಿಹಾರಿಯ ಮೂಲದವರು. ಉನ್ನತ ವ್ಯಾಸಂಗಕ್ಕಾಗಿ 1974ರಲ್ಲಿ ದೆಹಲಿಗೆ ಬಂದರು. ದೆಹಲಿಯಲ್ಲಿ ಪತ್ರಿಕೋದ್ಯಮವನ್ನು ಅಭ್ಯಾಸ ಮಾಡಿದ ರವೀಶ್, ತಮಗೆ ಇಂಗ್ಲೀಷ್ ಬರದಿದ್ದಕ್ಕಾಗಿ ಕೀಳರಿಮೆಯನ್ನು ಅನುಭವಿಸಿದವರು. ಸ್ವಪ್ರಯತ್ನದಿಂದಲೇ ಮೇಲೆಬಂದ ರವೀಶ್ 1996ರಲ್ಲಿ NDTV ಸೇರಿಕೊಂಡರು. ಸ್ವಂತ ಪರಿಶ್ರಮದಿಂದ NDTV India ಹಿಂದಿ ವಾಹಿನಿಯ ಸಂಪಾದಕರಾದರು. ಹಿಂದಿ ಗೊತ್ತಿರುವ ಎಲ್ಲರಿಗೂ ರವೀಶ್ ಚಿರಪರಿಚಿತರು. ಇವರ ಆಳವಾದ ವಿಶ್ಲೇಷಣೆ, ಪತ್ರಿಕೋದ್ಯಮದ ಸಾಂಪ್ರದಾಯಿಕವಲ್ಲದ ವಿಧಾನ, ಮಾತುಗಾರಿಕೆ, ಸತ್ಯವನ್ನು ಹುಡುಕುವುದಕ್ಕಾಗಿ ಎಲ್ಲೆಲ್ಲೋ ಸುತ್ತಾಡುವ ಇವರಿಗೆ ಖ್ಯಾತಿ, ಪ್ರಶಸ್ತಿಗಳು ಹುಡುಕಿಕೊಂಡು ಬಂದವು.

ಇತರ ಟಿವಿ ಆಂಕರ್‍ಗಳು ಒಂದು ವಿಷಯದ ಬಗ್ಗೆ ಅರ್ಧ ಗಂಟೆ ಚರ್ಚೆ ನಡೆಸುವುದೇ ಕಷ್ಟವಾಗಿರುವಾಗ, ಕೆಲವು ಮಹತ್ವದ ಸಂದರ್ಭದಲ್ಲಿ ಒಂದೇ ವಿಷಯದ ಮೇಲೆ ವಾರಗಟ್ಟಲೆ ವರದಿ, ಚರ್ಚೆ ಮಾಡಿದ ದಿಟ್ಟ ಪತ್ರಕರ್ತ ಈತ. ತೋರಿಸಿದ್ದನ್ನೇ ಮತ್ತೆ ಮತ್ತೆ ತೋರಿಸುವ, ಜೋರು ಗಂಟಲಿನಲ್ಲಿ ಅರ್ಥವಿಲ್ಲದ ಪ್ರಲಾಪ ಮಾಡುವ ಅದೆಷ್ಟೋ ‘ಖ್ಯಾತ’ ಪತ್ರಕರ್ತರಿಗಿಂತ ರವೀಶ್ ತೀರಾ ಭಿನ್ನ. ಯಾವುದೇ ಅಬ್ಬರವಿಲ್ಲದೆ ತಣ್ಣಗೆ ಈ ದೇಶದ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಸ್ಯೆಗಳನ್ನು ಆಧಾರಸಮೇತ ಎಳೆಎಳೆಯಾಗಿ ಬಿಚ್ಚಿಡುವ ರವೀಶ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಹಾಗೆಯೆ ಪಟ್ಟಭದ್ರ ಶಕ್ತಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಕೃಪೆ: ಅರವಿಂದ ತೆಗ್ಗಿನಮಠ

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ರವೀಶ್ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಕಳೆದ ಎರಡು ವರ್ಷಗಳಿಂದ ನಿರುದ್ಯೋಗದ ವಿಚಾರದಲ್ಲಿ ರವೀಶ್ ಕುಮಾರ್ ರವರು ನಡೆಸಿದ ಸರಣಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಹಲವು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು ಎಂದರೆ ಇವರ ಕಾರ್ಯಕ್ರಮದ ಪರಣಾಮ ಎಷ್ಟಿರಬೇಕು ಊಹಿಸಿ.

ಪರಿಣಾಮವಾಗಿ ಇವರಿಗೆ ಮಾತ್ರವಲ್ಲದೆ, ಇವರ ಕುಟುಂಬದ ಸದಸ್ಯರಿಗೂ ಬೆದರಿಕೆಗಳು ಶುರುವಾದವು. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಎಷ್ಟು troll ಮಾಡಲಾಯಿತೆಂದರೆ ಒಂದು ಕಾಲದಲ್ಲಿ ಇವರು ಸಾಮಾಜಿಕ ಜಾಲತಾಣಗಳನ್ನು ಸಂಪೂರ್ಣವಾಗಿ ತೊರೆಯುವಂತಾಯಿತು. ಕೊಲೆಯ ಬೆದರಿಕೆಗಳು ಸಾಮಾನ್ಯವಾದವು. ರವೀಶ್‍ರನ್ನು ಕೊಲೆ ಮಾಡುತ್ತೇನೆ ಎಂದು ಕೆಲವರು ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರವೀಶ್ ಪ್ರಸ್ತುತ ಸಮಯದಲ್ಲಿ ಎಲ್ಲಿದ್ದಾರೆ, ಎಲ್ಲಿಗೆ ಹೊರಟಿದ್ದಾರೆ ಎನ್ನುವ ವಿಷಯಗಳನ್ನು ಈ ಪೀಡಕರು ರವೀಶ್‍ಗೆ ನಿರಂತರವಾಗಿ ಕಳುಹಿಸುತ್ತಿರುತ್ತಾರೆ.

ಈಗ ರವೀಶ್ ಕುಮಾರ್ ರವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಇವರನ್ನು ಸೇರಿ ಐದು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಭಾರತದ ಹಲವು ಗಣ್ಯರು ರವೀಶ್ ಕುಮಾರ್ ರವರನ್ನು ಅಭಿನಂದಿಸಿದ್ದಾರೆ. ಆದರೆ ಪ್ರಜಾತಂತ್ರ ಯಶಸ್ವಿಯಾಗಬೇಕಾದರೆ ನಾಲ್ಕನೇ ಸ್ಥಂಬವೆಂದು ಪರಿಗಣಿತವಾಗಿರುವ ಪತ್ರಿಕಾರಂಗ ಸ್ವತಂತ್ರವಾಗಿ ಕೆಲಸ ಮಾಡುವಂತಿರಬೇಕು. ಮಾತ್ರವಲ್ಲ, ಪತ್ರಿಕಾರಂಗಕ್ಕೆ ಸಮಾಜದ ಹಿತವನ್ನು ಕಾಪಾಡುವ ಹೊಣೆಗಾರಿಕೆ ಇರಬೇಕು. ಇಂಥಾ ಜನಪರ ಪತ್ರಿಕೋದ್ಯಮವನ್ನು ಉಳಿಸಿ, ಬೆಳೆಸಲು ನಾವೇನು ಮಾಡಬೇಕು? ಸತ್ಯವನ್ನು ನುಡಿಯುವ ದಿಟ್ಟ ಪತ್ರಕರ್ತರ ರಕ್ಷಣೆಗೆ ನಾವು ಮಾಡಬೇಕಾಗಿರುವುದೇನು? ಇದು ನಾವು ಆದ್ಯತೆಯ ಮೇಲೆ ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...