Homeಚಳವಳಿನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

ನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

- Advertisement -
- Advertisement -

ಜನಪರ ಪತ್ರಕರ್ತ ಎನ್.ಡಿ.ಟಿ.ವಿಯ ರವೀಶ್ ಕುಮಾರ್ ರವರಿಗೆ ‘ಪತ್ರಿಕೋಧ್ಯಮದ ಮೂಲಕ ದನಿಯಿಲ್ಲದವರಿಗೆ ದನಿಯಾದ’ ಸಾಧನೆಗಾಗಿ ಏಷ್ಯಾದ ನೊಬೆಲ್ ಎನಿಸಿಕೊಂಡಿರುವ ಪ್ರತಿಷ್ಟಿತ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಲಭಿಸಿದೆ.

ರವೀಶ್ ಕುಮಾರ್, ಬಿಹಾರದ ಮೊತಿಹಾರಿಯ ಮೂಲದವರು. ಉನ್ನತ ವ್ಯಾಸಂಗಕ್ಕಾಗಿ 1974ರಲ್ಲಿ ದೆಹಲಿಗೆ ಬಂದರು. ದೆಹಲಿಯಲ್ಲಿ ಪತ್ರಿಕೋದ್ಯಮವನ್ನು ಅಭ್ಯಾಸ ಮಾಡಿದ ರವೀಶ್, ತಮಗೆ ಇಂಗ್ಲೀಷ್ ಬರದಿದ್ದಕ್ಕಾಗಿ ಕೀಳರಿಮೆಯನ್ನು ಅನುಭವಿಸಿದವರು. ಸ್ವಪ್ರಯತ್ನದಿಂದಲೇ ಮೇಲೆಬಂದ ರವೀಶ್ 1996ರಲ್ಲಿ NDTV ಸೇರಿಕೊಂಡರು. ಸ್ವಂತ ಪರಿಶ್ರಮದಿಂದ NDTV India ಹಿಂದಿ ವಾಹಿನಿಯ ಸಂಪಾದಕರಾದರು. ಹಿಂದಿ ಗೊತ್ತಿರುವ ಎಲ್ಲರಿಗೂ ರವೀಶ್ ಚಿರಪರಿಚಿತರು. ಇವರ ಆಳವಾದ ವಿಶ್ಲೇಷಣೆ, ಪತ್ರಿಕೋದ್ಯಮದ ಸಾಂಪ್ರದಾಯಿಕವಲ್ಲದ ವಿಧಾನ, ಮಾತುಗಾರಿಕೆ, ಸತ್ಯವನ್ನು ಹುಡುಕುವುದಕ್ಕಾಗಿ ಎಲ್ಲೆಲ್ಲೋ ಸುತ್ತಾಡುವ ಇವರಿಗೆ ಖ್ಯಾತಿ, ಪ್ರಶಸ್ತಿಗಳು ಹುಡುಕಿಕೊಂಡು ಬಂದವು.

ಇತರ ಟಿವಿ ಆಂಕರ್‍ಗಳು ಒಂದು ವಿಷಯದ ಬಗ್ಗೆ ಅರ್ಧ ಗಂಟೆ ಚರ್ಚೆ ನಡೆಸುವುದೇ ಕಷ್ಟವಾಗಿರುವಾಗ, ಕೆಲವು ಮಹತ್ವದ ಸಂದರ್ಭದಲ್ಲಿ ಒಂದೇ ವಿಷಯದ ಮೇಲೆ ವಾರಗಟ್ಟಲೆ ವರದಿ, ಚರ್ಚೆ ಮಾಡಿದ ದಿಟ್ಟ ಪತ್ರಕರ್ತ ಈತ. ತೋರಿಸಿದ್ದನ್ನೇ ಮತ್ತೆ ಮತ್ತೆ ತೋರಿಸುವ, ಜೋರು ಗಂಟಲಿನಲ್ಲಿ ಅರ್ಥವಿಲ್ಲದ ಪ್ರಲಾಪ ಮಾಡುವ ಅದೆಷ್ಟೋ ‘ಖ್ಯಾತ’ ಪತ್ರಕರ್ತರಿಗಿಂತ ರವೀಶ್ ತೀರಾ ಭಿನ್ನ. ಯಾವುದೇ ಅಬ್ಬರವಿಲ್ಲದೆ ತಣ್ಣಗೆ ಈ ದೇಶದ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಸ್ಯೆಗಳನ್ನು ಆಧಾರಸಮೇತ ಎಳೆಎಳೆಯಾಗಿ ಬಿಚ್ಚಿಡುವ ರವೀಶ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಹಾಗೆಯೆ ಪಟ್ಟಭದ್ರ ಶಕ್ತಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಕೃಪೆ: ಅರವಿಂದ ತೆಗ್ಗಿನಮಠ

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ರವೀಶ್ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಕಳೆದ ಎರಡು ವರ್ಷಗಳಿಂದ ನಿರುದ್ಯೋಗದ ವಿಚಾರದಲ್ಲಿ ರವೀಶ್ ಕುಮಾರ್ ರವರು ನಡೆಸಿದ ಸರಣಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಹಲವು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು ಎಂದರೆ ಇವರ ಕಾರ್ಯಕ್ರಮದ ಪರಣಾಮ ಎಷ್ಟಿರಬೇಕು ಊಹಿಸಿ.

ಪರಿಣಾಮವಾಗಿ ಇವರಿಗೆ ಮಾತ್ರವಲ್ಲದೆ, ಇವರ ಕುಟುಂಬದ ಸದಸ್ಯರಿಗೂ ಬೆದರಿಕೆಗಳು ಶುರುವಾದವು. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಎಷ್ಟು troll ಮಾಡಲಾಯಿತೆಂದರೆ ಒಂದು ಕಾಲದಲ್ಲಿ ಇವರು ಸಾಮಾಜಿಕ ಜಾಲತಾಣಗಳನ್ನು ಸಂಪೂರ್ಣವಾಗಿ ತೊರೆಯುವಂತಾಯಿತು. ಕೊಲೆಯ ಬೆದರಿಕೆಗಳು ಸಾಮಾನ್ಯವಾದವು. ರವೀಶ್‍ರನ್ನು ಕೊಲೆ ಮಾಡುತ್ತೇನೆ ಎಂದು ಕೆಲವರು ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರವೀಶ್ ಪ್ರಸ್ತುತ ಸಮಯದಲ್ಲಿ ಎಲ್ಲಿದ್ದಾರೆ, ಎಲ್ಲಿಗೆ ಹೊರಟಿದ್ದಾರೆ ಎನ್ನುವ ವಿಷಯಗಳನ್ನು ಈ ಪೀಡಕರು ರವೀಶ್‍ಗೆ ನಿರಂತರವಾಗಿ ಕಳುಹಿಸುತ್ತಿರುತ್ತಾರೆ.

ಈಗ ರವೀಶ್ ಕುಮಾರ್ ರವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಇವರನ್ನು ಸೇರಿ ಐದು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಭಾರತದ ಹಲವು ಗಣ್ಯರು ರವೀಶ್ ಕುಮಾರ್ ರವರನ್ನು ಅಭಿನಂದಿಸಿದ್ದಾರೆ. ಆದರೆ ಪ್ರಜಾತಂತ್ರ ಯಶಸ್ವಿಯಾಗಬೇಕಾದರೆ ನಾಲ್ಕನೇ ಸ್ಥಂಬವೆಂದು ಪರಿಗಣಿತವಾಗಿರುವ ಪತ್ರಿಕಾರಂಗ ಸ್ವತಂತ್ರವಾಗಿ ಕೆಲಸ ಮಾಡುವಂತಿರಬೇಕು. ಮಾತ್ರವಲ್ಲ, ಪತ್ರಿಕಾರಂಗಕ್ಕೆ ಸಮಾಜದ ಹಿತವನ್ನು ಕಾಪಾಡುವ ಹೊಣೆಗಾರಿಕೆ ಇರಬೇಕು. ಇಂಥಾ ಜನಪರ ಪತ್ರಿಕೋದ್ಯಮವನ್ನು ಉಳಿಸಿ, ಬೆಳೆಸಲು ನಾವೇನು ಮಾಡಬೇಕು? ಸತ್ಯವನ್ನು ನುಡಿಯುವ ದಿಟ್ಟ ಪತ್ರಕರ್ತರ ರಕ್ಷಣೆಗೆ ನಾವು ಮಾಡಬೇಕಾಗಿರುವುದೇನು? ಇದು ನಾವು ಆದ್ಯತೆಯ ಮೇಲೆ ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...