Homeಚಳವಳಿನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

ನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

- Advertisement -
- Advertisement -

ಜನಪರ ಪತ್ರಕರ್ತ ಎನ್.ಡಿ.ಟಿ.ವಿಯ ರವೀಶ್ ಕುಮಾರ್ ರವರಿಗೆ ‘ಪತ್ರಿಕೋಧ್ಯಮದ ಮೂಲಕ ದನಿಯಿಲ್ಲದವರಿಗೆ ದನಿಯಾದ’ ಸಾಧನೆಗಾಗಿ ಏಷ್ಯಾದ ನೊಬೆಲ್ ಎನಿಸಿಕೊಂಡಿರುವ ಪ್ರತಿಷ್ಟಿತ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಲಭಿಸಿದೆ.

ರವೀಶ್ ಕುಮಾರ್, ಬಿಹಾರದ ಮೊತಿಹಾರಿಯ ಮೂಲದವರು. ಉನ್ನತ ವ್ಯಾಸಂಗಕ್ಕಾಗಿ 1974ರಲ್ಲಿ ದೆಹಲಿಗೆ ಬಂದರು. ದೆಹಲಿಯಲ್ಲಿ ಪತ್ರಿಕೋದ್ಯಮವನ್ನು ಅಭ್ಯಾಸ ಮಾಡಿದ ರವೀಶ್, ತಮಗೆ ಇಂಗ್ಲೀಷ್ ಬರದಿದ್ದಕ್ಕಾಗಿ ಕೀಳರಿಮೆಯನ್ನು ಅನುಭವಿಸಿದವರು. ಸ್ವಪ್ರಯತ್ನದಿಂದಲೇ ಮೇಲೆಬಂದ ರವೀಶ್ 1996ರಲ್ಲಿ NDTV ಸೇರಿಕೊಂಡರು. ಸ್ವಂತ ಪರಿಶ್ರಮದಿಂದ NDTV India ಹಿಂದಿ ವಾಹಿನಿಯ ಸಂಪಾದಕರಾದರು. ಹಿಂದಿ ಗೊತ್ತಿರುವ ಎಲ್ಲರಿಗೂ ರವೀಶ್ ಚಿರಪರಿಚಿತರು. ಇವರ ಆಳವಾದ ವಿಶ್ಲೇಷಣೆ, ಪತ್ರಿಕೋದ್ಯಮದ ಸಾಂಪ್ರದಾಯಿಕವಲ್ಲದ ವಿಧಾನ, ಮಾತುಗಾರಿಕೆ, ಸತ್ಯವನ್ನು ಹುಡುಕುವುದಕ್ಕಾಗಿ ಎಲ್ಲೆಲ್ಲೋ ಸುತ್ತಾಡುವ ಇವರಿಗೆ ಖ್ಯಾತಿ, ಪ್ರಶಸ್ತಿಗಳು ಹುಡುಕಿಕೊಂಡು ಬಂದವು.

ಇತರ ಟಿವಿ ಆಂಕರ್‍ಗಳು ಒಂದು ವಿಷಯದ ಬಗ್ಗೆ ಅರ್ಧ ಗಂಟೆ ಚರ್ಚೆ ನಡೆಸುವುದೇ ಕಷ್ಟವಾಗಿರುವಾಗ, ಕೆಲವು ಮಹತ್ವದ ಸಂದರ್ಭದಲ್ಲಿ ಒಂದೇ ವಿಷಯದ ಮೇಲೆ ವಾರಗಟ್ಟಲೆ ವರದಿ, ಚರ್ಚೆ ಮಾಡಿದ ದಿಟ್ಟ ಪತ್ರಕರ್ತ ಈತ. ತೋರಿಸಿದ್ದನ್ನೇ ಮತ್ತೆ ಮತ್ತೆ ತೋರಿಸುವ, ಜೋರು ಗಂಟಲಿನಲ್ಲಿ ಅರ್ಥವಿಲ್ಲದ ಪ್ರಲಾಪ ಮಾಡುವ ಅದೆಷ್ಟೋ ‘ಖ್ಯಾತ’ ಪತ್ರಕರ್ತರಿಗಿಂತ ರವೀಶ್ ತೀರಾ ಭಿನ್ನ. ಯಾವುದೇ ಅಬ್ಬರವಿಲ್ಲದೆ ತಣ್ಣಗೆ ಈ ದೇಶದ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಸ್ಯೆಗಳನ್ನು ಆಧಾರಸಮೇತ ಎಳೆಎಳೆಯಾಗಿ ಬಿಚ್ಚಿಡುವ ರವೀಶ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಹಾಗೆಯೆ ಪಟ್ಟಭದ್ರ ಶಕ್ತಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಕೃಪೆ: ಅರವಿಂದ ತೆಗ್ಗಿನಮಠ

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ರವೀಶ್ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಕಳೆದ ಎರಡು ವರ್ಷಗಳಿಂದ ನಿರುದ್ಯೋಗದ ವಿಚಾರದಲ್ಲಿ ರವೀಶ್ ಕುಮಾರ್ ರವರು ನಡೆಸಿದ ಸರಣಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಹಲವು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು ಎಂದರೆ ಇವರ ಕಾರ್ಯಕ್ರಮದ ಪರಣಾಮ ಎಷ್ಟಿರಬೇಕು ಊಹಿಸಿ.

ಪರಿಣಾಮವಾಗಿ ಇವರಿಗೆ ಮಾತ್ರವಲ್ಲದೆ, ಇವರ ಕುಟುಂಬದ ಸದಸ್ಯರಿಗೂ ಬೆದರಿಕೆಗಳು ಶುರುವಾದವು. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಎಷ್ಟು troll ಮಾಡಲಾಯಿತೆಂದರೆ ಒಂದು ಕಾಲದಲ್ಲಿ ಇವರು ಸಾಮಾಜಿಕ ಜಾಲತಾಣಗಳನ್ನು ಸಂಪೂರ್ಣವಾಗಿ ತೊರೆಯುವಂತಾಯಿತು. ಕೊಲೆಯ ಬೆದರಿಕೆಗಳು ಸಾಮಾನ್ಯವಾದವು. ರವೀಶ್‍ರನ್ನು ಕೊಲೆ ಮಾಡುತ್ತೇನೆ ಎಂದು ಕೆಲವರು ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರವೀಶ್ ಪ್ರಸ್ತುತ ಸಮಯದಲ್ಲಿ ಎಲ್ಲಿದ್ದಾರೆ, ಎಲ್ಲಿಗೆ ಹೊರಟಿದ್ದಾರೆ ಎನ್ನುವ ವಿಷಯಗಳನ್ನು ಈ ಪೀಡಕರು ರವೀಶ್‍ಗೆ ನಿರಂತರವಾಗಿ ಕಳುಹಿಸುತ್ತಿರುತ್ತಾರೆ.

ಈಗ ರವೀಶ್ ಕುಮಾರ್ ರವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಇವರನ್ನು ಸೇರಿ ಐದು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಭಾರತದ ಹಲವು ಗಣ್ಯರು ರವೀಶ್ ಕುಮಾರ್ ರವರನ್ನು ಅಭಿನಂದಿಸಿದ್ದಾರೆ. ಆದರೆ ಪ್ರಜಾತಂತ್ರ ಯಶಸ್ವಿಯಾಗಬೇಕಾದರೆ ನಾಲ್ಕನೇ ಸ್ಥಂಬವೆಂದು ಪರಿಗಣಿತವಾಗಿರುವ ಪತ್ರಿಕಾರಂಗ ಸ್ವತಂತ್ರವಾಗಿ ಕೆಲಸ ಮಾಡುವಂತಿರಬೇಕು. ಮಾತ್ರವಲ್ಲ, ಪತ್ರಿಕಾರಂಗಕ್ಕೆ ಸಮಾಜದ ಹಿತವನ್ನು ಕಾಪಾಡುವ ಹೊಣೆಗಾರಿಕೆ ಇರಬೇಕು. ಇಂಥಾ ಜನಪರ ಪತ್ರಿಕೋದ್ಯಮವನ್ನು ಉಳಿಸಿ, ಬೆಳೆಸಲು ನಾವೇನು ಮಾಡಬೇಕು? ಸತ್ಯವನ್ನು ನುಡಿಯುವ ದಿಟ್ಟ ಪತ್ರಕರ್ತರ ರಕ್ಷಣೆಗೆ ನಾವು ಮಾಡಬೇಕಾಗಿರುವುದೇನು? ಇದು ನಾವು ಆದ್ಯತೆಯ ಮೇಲೆ ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....