Homeಚಳವಳಿನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

ನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

- Advertisement -
- Advertisement -

ಜನಪರ ಪತ್ರಕರ್ತ ಎನ್.ಡಿ.ಟಿ.ವಿಯ ರವೀಶ್ ಕುಮಾರ್ ರವರಿಗೆ ‘ಪತ್ರಿಕೋಧ್ಯಮದ ಮೂಲಕ ದನಿಯಿಲ್ಲದವರಿಗೆ ದನಿಯಾದ’ ಸಾಧನೆಗಾಗಿ ಏಷ್ಯಾದ ನೊಬೆಲ್ ಎನಿಸಿಕೊಂಡಿರುವ ಪ್ರತಿಷ್ಟಿತ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಲಭಿಸಿದೆ.

ರವೀಶ್ ಕುಮಾರ್, ಬಿಹಾರದ ಮೊತಿಹಾರಿಯ ಮೂಲದವರು. ಉನ್ನತ ವ್ಯಾಸಂಗಕ್ಕಾಗಿ 1974ರಲ್ಲಿ ದೆಹಲಿಗೆ ಬಂದರು. ದೆಹಲಿಯಲ್ಲಿ ಪತ್ರಿಕೋದ್ಯಮವನ್ನು ಅಭ್ಯಾಸ ಮಾಡಿದ ರವೀಶ್, ತಮಗೆ ಇಂಗ್ಲೀಷ್ ಬರದಿದ್ದಕ್ಕಾಗಿ ಕೀಳರಿಮೆಯನ್ನು ಅನುಭವಿಸಿದವರು. ಸ್ವಪ್ರಯತ್ನದಿಂದಲೇ ಮೇಲೆಬಂದ ರವೀಶ್ 1996ರಲ್ಲಿ NDTV ಸೇರಿಕೊಂಡರು. ಸ್ವಂತ ಪರಿಶ್ರಮದಿಂದ NDTV India ಹಿಂದಿ ವಾಹಿನಿಯ ಸಂಪಾದಕರಾದರು. ಹಿಂದಿ ಗೊತ್ತಿರುವ ಎಲ್ಲರಿಗೂ ರವೀಶ್ ಚಿರಪರಿಚಿತರು. ಇವರ ಆಳವಾದ ವಿಶ್ಲೇಷಣೆ, ಪತ್ರಿಕೋದ್ಯಮದ ಸಾಂಪ್ರದಾಯಿಕವಲ್ಲದ ವಿಧಾನ, ಮಾತುಗಾರಿಕೆ, ಸತ್ಯವನ್ನು ಹುಡುಕುವುದಕ್ಕಾಗಿ ಎಲ್ಲೆಲ್ಲೋ ಸುತ್ತಾಡುವ ಇವರಿಗೆ ಖ್ಯಾತಿ, ಪ್ರಶಸ್ತಿಗಳು ಹುಡುಕಿಕೊಂಡು ಬಂದವು.

ಇತರ ಟಿವಿ ಆಂಕರ್‍ಗಳು ಒಂದು ವಿಷಯದ ಬಗ್ಗೆ ಅರ್ಧ ಗಂಟೆ ಚರ್ಚೆ ನಡೆಸುವುದೇ ಕಷ್ಟವಾಗಿರುವಾಗ, ಕೆಲವು ಮಹತ್ವದ ಸಂದರ್ಭದಲ್ಲಿ ಒಂದೇ ವಿಷಯದ ಮೇಲೆ ವಾರಗಟ್ಟಲೆ ವರದಿ, ಚರ್ಚೆ ಮಾಡಿದ ದಿಟ್ಟ ಪತ್ರಕರ್ತ ಈತ. ತೋರಿಸಿದ್ದನ್ನೇ ಮತ್ತೆ ಮತ್ತೆ ತೋರಿಸುವ, ಜೋರು ಗಂಟಲಿನಲ್ಲಿ ಅರ್ಥವಿಲ್ಲದ ಪ್ರಲಾಪ ಮಾಡುವ ಅದೆಷ್ಟೋ ‘ಖ್ಯಾತ’ ಪತ್ರಕರ್ತರಿಗಿಂತ ರವೀಶ್ ತೀರಾ ಭಿನ್ನ. ಯಾವುದೇ ಅಬ್ಬರವಿಲ್ಲದೆ ತಣ್ಣಗೆ ಈ ದೇಶದ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಸ್ಯೆಗಳನ್ನು ಆಧಾರಸಮೇತ ಎಳೆಎಳೆಯಾಗಿ ಬಿಚ್ಚಿಡುವ ರವೀಶ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಹಾಗೆಯೆ ಪಟ್ಟಭದ್ರ ಶಕ್ತಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಕೃಪೆ: ಅರವಿಂದ ತೆಗ್ಗಿನಮಠ

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ರವೀಶ್ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಕಳೆದ ಎರಡು ವರ್ಷಗಳಿಂದ ನಿರುದ್ಯೋಗದ ವಿಚಾರದಲ್ಲಿ ರವೀಶ್ ಕುಮಾರ್ ರವರು ನಡೆಸಿದ ಸರಣಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಹಲವು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು ಎಂದರೆ ಇವರ ಕಾರ್ಯಕ್ರಮದ ಪರಣಾಮ ಎಷ್ಟಿರಬೇಕು ಊಹಿಸಿ.

ಪರಿಣಾಮವಾಗಿ ಇವರಿಗೆ ಮಾತ್ರವಲ್ಲದೆ, ಇವರ ಕುಟುಂಬದ ಸದಸ್ಯರಿಗೂ ಬೆದರಿಕೆಗಳು ಶುರುವಾದವು. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಎಷ್ಟು troll ಮಾಡಲಾಯಿತೆಂದರೆ ಒಂದು ಕಾಲದಲ್ಲಿ ಇವರು ಸಾಮಾಜಿಕ ಜಾಲತಾಣಗಳನ್ನು ಸಂಪೂರ್ಣವಾಗಿ ತೊರೆಯುವಂತಾಯಿತು. ಕೊಲೆಯ ಬೆದರಿಕೆಗಳು ಸಾಮಾನ್ಯವಾದವು. ರವೀಶ್‍ರನ್ನು ಕೊಲೆ ಮಾಡುತ್ತೇನೆ ಎಂದು ಕೆಲವರು ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರವೀಶ್ ಪ್ರಸ್ತುತ ಸಮಯದಲ್ಲಿ ಎಲ್ಲಿದ್ದಾರೆ, ಎಲ್ಲಿಗೆ ಹೊರಟಿದ್ದಾರೆ ಎನ್ನುವ ವಿಷಯಗಳನ್ನು ಈ ಪೀಡಕರು ರವೀಶ್‍ಗೆ ನಿರಂತರವಾಗಿ ಕಳುಹಿಸುತ್ತಿರುತ್ತಾರೆ.

ಈಗ ರವೀಶ್ ಕುಮಾರ್ ರವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಇವರನ್ನು ಸೇರಿ ಐದು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಭಾರತದ ಹಲವು ಗಣ್ಯರು ರವೀಶ್ ಕುಮಾರ್ ರವರನ್ನು ಅಭಿನಂದಿಸಿದ್ದಾರೆ. ಆದರೆ ಪ್ರಜಾತಂತ್ರ ಯಶಸ್ವಿಯಾಗಬೇಕಾದರೆ ನಾಲ್ಕನೇ ಸ್ಥಂಬವೆಂದು ಪರಿಗಣಿತವಾಗಿರುವ ಪತ್ರಿಕಾರಂಗ ಸ್ವತಂತ್ರವಾಗಿ ಕೆಲಸ ಮಾಡುವಂತಿರಬೇಕು. ಮಾತ್ರವಲ್ಲ, ಪತ್ರಿಕಾರಂಗಕ್ಕೆ ಸಮಾಜದ ಹಿತವನ್ನು ಕಾಪಾಡುವ ಹೊಣೆಗಾರಿಕೆ ಇರಬೇಕು. ಇಂಥಾ ಜನಪರ ಪತ್ರಿಕೋದ್ಯಮವನ್ನು ಉಳಿಸಿ, ಬೆಳೆಸಲು ನಾವೇನು ಮಾಡಬೇಕು? ಸತ್ಯವನ್ನು ನುಡಿಯುವ ದಿಟ್ಟ ಪತ್ರಕರ್ತರ ರಕ್ಷಣೆಗೆ ನಾವು ಮಾಡಬೇಕಾಗಿರುವುದೇನು? ಇದು ನಾವು ಆದ್ಯತೆಯ ಮೇಲೆ ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...