Homeಮುಖಪುಟಬಿಹಾರದಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ: ಕಳವಳ ವ್ಯಕ್ತಪಡಿಸಿದ ಸಿಎಂ

ಬಿಹಾರದಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ: ಕಳವಳ ವ್ಯಕ್ತಪಡಿಸಿದ ಸಿಎಂ

- Advertisement -
- Advertisement -

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಅಪರಿಚಿತರು ಪತ್ರಕರ್ತರೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತವಿಮಲ್ ಕುಮಾರ್ ಯಾದವ್ (35) ಎಂಬುವರನ್ನು ಪ್ರೇಮನಗರ ಗ್ರಾಮದ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ. ಇವರು ಹಿಂದಿ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿರುವ ಬಿಹಾರ ಪೊಲೀಸರು, ”ದಾಳಿಕೋರರು ಶುಕ್ರವಾರ ಬೆಳಿಗ್ಗೆ 5.30ರ ಸುಮಾರಿಗೆ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದಾರೆ. ಈ ವೇಳೆ ಅವರು ಗೇಟ್ ತೆರೆದ ತಕ್ಷಣ ಗುಂಡು ಹಾರಿಸಿದ್ದಾರೆ” ಎಂದು ಬರೆದಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಯಾದವ್ ಸ್ಥಳದಲ್ಲೇ ಮೃತಪಟ್ಟರು. ಸುದ್ದಿ ತಿಳಿದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಯ ರಾಣಿಗಂಜ್‌ನ ಎಸ್‌ಎಚ್‌ಒ ಸ್ಥಳಕ್ಕೆ ಧಾವಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಅವರು, ”ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನದಳವನ್ನು ಕರೆಸಲಾಗಿದೆ. ಮೃತ ಪತ್ರಕರ್ತ ಯಾದವ್ ಅವರು ಹಳೆಯ ವಿವಾದದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ. ಎಲ್ಲಾ ದೃಷ್ಟಿಕೋನದಲ್ಲೂ ತನಿಖೆ ನಡೆಸಲಾಗುತ್ತಿದೆ” ಎಂದು  ಹೇಳಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ, ”ನಾನು ನಿಜವಾಗಿಯೂ ದುಃಖಿತನಾಗಿದ್ದೇನೆ ಮತ್ತು ತಕ್ಷಣವೇ ಘಟನೆಯ ಬಗ್ಗೆ ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಹೇಳಿದ್ದಾರೆ.

ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ಬಿಹಾರದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ತೋರಿಸುತ್ತದೆ ಎಂದು ಆರೋಪಿಸಿದೆ.

”ಬಿಹಾರದಲ್ಲಿ ಪತ್ರಕರ್ತರು ಸೇರಿದಂತೆ ಅಮಾಯಕ ನಾಗರಿಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಸಹ ಕೊಲ್ಲುತ್ತಿರುವಾಗ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ಆರೋಪಿಸಿದ್ದಾರೆ.

ವಿರೋಧಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ”ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಸಿಎಂ ಸೂಚನೆ ನೀಡಿದ್ದಾರೆ. ಬಿಜೆಪಿಯವರು ರಾಜ್ಯದ ಪ್ರತಿಷ್ಠೆಯನ್ನು ಹಾಳು ಮಾಡುವ ಕೆಲಸವನ್ನು ಮಾತ್ರ ಮಾಡುತ್ತಿದ್ದಾರೆ. ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲೇ ಅತಿಹೆಚ್ಚು ಕೊಲೆ, ಅಪಹರಣ ಮತ್ತು ಲೂಟಿ ಸೇರಿದಂತೆ ಅಪರಾಧ ಪ್ರಕರಣಗಳು ದಾಖಲಾಗಿದೆ. ಅಲ್ಲಿ ಪೊಲೀಸ್ ಇಲಾಖೆಯು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿದೆ. ದೇಶದ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಅಲ್ಲಿ ವಾಸಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...