Homeಮುಖಪುಟಕಡೆಗೂ ಬಿಡುಗಡೆಗೊಂಡ ಪತ್ರಕರ್ತ ಸಿದ್ದಿಕ್ ಕಪ್ಪನ್: 28 ತಿಂಗಳ ಜೈಲುವಾಸ ಅಂತ್ಯ

ಕಡೆಗೂ ಬಿಡುಗಡೆಗೊಂಡ ಪತ್ರಕರ್ತ ಸಿದ್ದಿಕ್ ಕಪ್ಪನ್: 28 ತಿಂಗಳ ಜೈಲುವಾಸ ಅಂತ್ಯ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ 28 ತಿಂಗಳುಗಳಿಂದ ಬಂಧನದಲ್ಲಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ ಕೊನೆಗೂ ಇಂದು ಲಕ್ನೋ ಜೈಲಿನಿಂದ ಹೊರಬಂದರು.

“28 ತಿಂಗಳ ಸುದೀರ್ಘ ಹೋರಾಟದ ನಂತರ ಬಿಡುಗಡೆಯಾಗಿದ್ದೇನೆ. ಜಾಮೀನು ಸಿಕ್ಕ ನಂತರವೂ ನನ್ನನ್ನು ಜೈಲಿನಲ್ಲಿಟ್ಟಿದ್ದರು. ನಾನು ಜೈಲಿನಲ್ಲಿರುವುದರಿಂದ ಯಾರಿಗೆ ಲಾಭವಾಗಿದೆಯೋ ಗೊತ್ತಿಲ್ಲ. ಈ ಎರಡು ವರ್ಷಗಳು ತುಂಬಾ ಕಠಿಣವಾಗಿದ್ದವು, ಆದರೆ ನಾನು ಎಂದಿಗೂ ಹೆದರಲಿಲ್ಲ. ಮುಂದೆಯೂ ಸರ್ಕಾರದ ಕಠಿಣ ಕಾನೂನುಗಳ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಬಿಡುಗಡೆ ಬಳಿಕ ಕಪ್ಪನ್ ಹೇಳಿದ್ದಾರೆ.

2020 ರ ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. 2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆನಂತರ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು.

ಆನಂತರ ವಿಚಾರಣೆ ಆಲಿಸಿದ ಅಲಹಾಬಾದ್ ಹೈಕೋರ್ಟ್ ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಇತ್ತೀಚೆಗೆ ಜಾಮೀನು ನೀಡಿತ್ತು.

ಇದನ್ನೂ ಓದಿ; ಒಕ್ಕೂಟ ಬಜೆಟ್ 2023-24: ‘ಕಡಿತ-ಬಡಿತ’ಗಳ ಬಜೆಟ್ – ಟಿ. ಆರ್. ಚಂದ್ರಶೇಖರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...