Homeಮುಖಪುಟಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

ಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಎರಡು ವರ್ಷಗಳಿಂದ ಯುಎಪಿಎ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಲುಕಿ ಲಕ್ನೋ ಜೈಲಿನಲ್ಲಿದ್ದ ಅವರು ಬಿಡುಗೆಯಾಗಲಿದ್ದಾರೆ.

2022ರ ಸೆಪ್ಟಂಬರ್‌ನಲ್ಲಿ ಯುಎಪಿಎ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಅವರು ಲಕ್ನೋ ಜೈಲಿನಲ್ಲಿದ್ದರು. ಈಗ ಅಲಹಾಬಾದ್ ಹೈಕೋರ್ಟ್ ಆ ಪ್ರಕರಣದಲ್ಲಿಯೂ ಜಾಮೀನು ನೀಡಿದೆ.

ಸಿದ್ದಿಕ್ ಕಪ್ಪನ್ ಮತ್ತು ಇತರರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ನ ಸದಸ್ಯರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರು ಭಯೋತ್ಪಾದಕ ಕೃತ್ಯಗಳು ಅಥವಾ ಅಕ್ರಮ ಹಣಕಾಸು ವಹಿವಾಟು ನಡೆಸಿಲ್ಲ. ಬದಲಾಗಿ ಪತ್ರಿಕೋದ್ಯಮದ ಕೆಲಸಕ್ಕಾಗಿ ಮಾತ್ರ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದರು ಆರೋಪಿಗಳ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿತ್ತು.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಇದನ್ನೂ ಓದಿ; ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...