Homeಮುಖಪುಟಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

ಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಎರಡು ವರ್ಷಗಳಿಂದ ಯುಎಪಿಎ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಲುಕಿ ಲಕ್ನೋ ಜೈಲಿನಲ್ಲಿದ್ದ ಅವರು ಬಿಡುಗೆಯಾಗಲಿದ್ದಾರೆ.

2022ರ ಸೆಪ್ಟಂಬರ್‌ನಲ್ಲಿ ಯುಎಪಿಎ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಅವರು ಲಕ್ನೋ ಜೈಲಿನಲ್ಲಿದ್ದರು. ಈಗ ಅಲಹಾಬಾದ್ ಹೈಕೋರ್ಟ್ ಆ ಪ್ರಕರಣದಲ್ಲಿಯೂ ಜಾಮೀನು ನೀಡಿದೆ.

ಸಿದ್ದಿಕ್ ಕಪ್ಪನ್ ಮತ್ತು ಇತರರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ನ ಸದಸ್ಯರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರು ಭಯೋತ್ಪಾದಕ ಕೃತ್ಯಗಳು ಅಥವಾ ಅಕ್ರಮ ಹಣಕಾಸು ವಹಿವಾಟು ನಡೆಸಿಲ್ಲ. ಬದಲಾಗಿ ಪತ್ರಿಕೋದ್ಯಮದ ಕೆಲಸಕ್ಕಾಗಿ ಮಾತ್ರ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದರು ಆರೋಪಿಗಳ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿತ್ತು.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಇದನ್ನೂ ಓದಿ; ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...