Homeಮುಖಪುಟಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

ಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಎರಡು ವರ್ಷಗಳಿಂದ ಯುಎಪಿಎ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಲುಕಿ ಲಕ್ನೋ ಜೈಲಿನಲ್ಲಿದ್ದ ಅವರು ಬಿಡುಗೆಯಾಗಲಿದ್ದಾರೆ.

2022ರ ಸೆಪ್ಟಂಬರ್‌ನಲ್ಲಿ ಯುಎಪಿಎ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಅವರು ಲಕ್ನೋ ಜೈಲಿನಲ್ಲಿದ್ದರು. ಈಗ ಅಲಹಾಬಾದ್ ಹೈಕೋರ್ಟ್ ಆ ಪ್ರಕರಣದಲ್ಲಿಯೂ ಜಾಮೀನು ನೀಡಿದೆ.

ಸಿದ್ದಿಕ್ ಕಪ್ಪನ್ ಮತ್ತು ಇತರರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ನ ಸದಸ್ಯರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರು ಭಯೋತ್ಪಾದಕ ಕೃತ್ಯಗಳು ಅಥವಾ ಅಕ್ರಮ ಹಣಕಾಸು ವಹಿವಾಟು ನಡೆಸಿಲ್ಲ. ಬದಲಾಗಿ ಪತ್ರಿಕೋದ್ಯಮದ ಕೆಲಸಕ್ಕಾಗಿ ಮಾತ್ರ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದರು ಆರೋಪಿಗಳ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿತ್ತು.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಇದನ್ನೂ ಓದಿ; ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...