Homeಮುಖಪುಟಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

ಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿತ್ತು. ಆದರೆ, ಕೋರ್ಟ್‌ ಅವರಿಗೆ ಜಾಮೀನು ನೀಡಿ ವಾರಗಳು ಕಳೆದರೂ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ. 2022ರ ಡಿಸೆಂಬರ್‌ 23ರಂದು ಜಾಮೀನು ಆದೇಶವನ್ನು ಅಂಗೀಕರಿಸಲಾಗಿದ್ದರೂ, ಅವರ ಜಾಮೀನು ಶ್ಯೂರಿಟಿಯನ್ನು ಇನ್ನೂ ಪರಿಶೀಲಿಸಲಾಗಿಲ್ಲ.

ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ವಿರುದ್ಧ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅವರಿಗೆ 2022ರ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಾಲಯದ ಮುಂದೆ ಪಿಎಂಎಲ್‌ಎ ಪ್ರಕರಣದಲ್ಲಿ ಜಾಮೀನು ಶ್ಯೂರಿಟಿಗಳನ್ನು ಈಗಾಗಲೇ ಸಲ್ಲಿಸಿದ್ದೇವೆ ಎಂದು ಕಪ್ಪನ್‌ ಅವರನ್ನು ಪ್ರತಿನಿಧಿಸುವ ವಕೀಲರಲ್ಲಿ ಒಬ್ಬರಾದ ವಕೀಲ ಮೊಹಮ್ಮದ್ ಡ್ಯಾನಿಶ್ ಕೆ.ಎಸ್. ಹೇಳಿದ್ದಾರೆ.

“ನಾವು ಶ್ಯೂರಿಟಿಯ ಪರಿಶೀಲನೆಗಾಗಿ ಕಾಯುತ್ತಿದ್ದೇವೆ. ಅವುಗಳನ್ನು ಸ್ಥಳೀಯ ಅಧಿಕಾರಿಗಳು ಪರಿಶೀಲಿಸಬೇಕಾಗಿದ್ದು, ಇದು ಸಾಮಾನ್ಯವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಜಾಮೀನು ಷರತ್ತುಗಳನ್ನು ನಿಗದಿಪಡಿಸುವ ವೇಳೆ, ಯುಎಪಿಎ ಪ್ರಕರಣದ ಜಾಮೀನು ಶ್ಯೂರಿಟಿಗಳನ್ನು ಪರಿಶೀಲಿಸುವಲ್ಲಿ ಮೂರು ತಿಂಗಳಿಗೂ ಹೆಚ್ಚಿನ ವಿಳಂಬವಾಗಿದೆ ಎಂದು ನಾವು ನ್ಯಾಯಾಲಯಕ್ಕೆ ನೆನಪಿಸಿದ್ದೇವೆ” ಎಂದು ಡ್ಯಾನಿಶ್‌ ಅವರು ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ಜಾಮೀನು ಪಡೆದಾಗ ಸಿದ್ದಿಕ್ ಕಪ್ಪನ್ ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅಷ್ಟೆ ಮೊತ್ತದ ವೈಯಕ್ತಿಕ ಬಾಂಡ್ ನೀಡುವಂತೆ ಕೇಳಲಾಗಿತ್ತು. ಪ್ರಸ್ತುತ ಪ್ರಕರಣವು ಸಹ ಇದೇ ರೀತಿಯಲ್ಲಿ ಇದ್ದು, ಕಪ್ಪನ್ ಅವರು ತಲಾ 1 ಲಕ್ಷ ರೂಪಾಯಿಗಳ ಎರಡು ಸ್ಥಳೀಯ ಶ್ಯೂರಿಟಿಗಳು ಮತ್ತು ವೈಯಕ್ತಿಕ ಬಾಂಡ್ ಅನ್ನು ಒದಗಿಸಬೇಕಾಗಿದೆ.

“ಪಿಎಂಎಲ್‌ಎ ಪ್ರಕರಣದಲ್ಲಿ ನಾವು ನ್ಯಾಯಾಲಯದ ಮುಂದೆ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದಾಗ, ಇತರ ಪ್ರಕರಣದಲ್ಲಿನ ವಿಳಂಬವನ್ನು ಪರಿಗಣಿಸಿ ಪರಿಶೀಲನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಾಲಯವು ನಮಗೆ ಭರವಸೆ ನೀಡಿತು. ಆದರೆ ಶ್ಯೂರಿಟಿಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ”

“ಯಾಕೆಂದರೆ ಹಲವು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅದು ನ್ಯಾಯಾಲಯದ ನಿಯಂತ್ರಣದಲ್ಲಿಲ್ಲ. ಪರಿಶೀಲನೆ ಇಂದು (ಜನವರಿ 30ರ ಸೋಮವಾರ) ಅಥವಾ ನಾಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಂತರ ಜಾಮೀನು ಬಾಂಡ್ ಮತ್ತು ಬಿಡುಗಡೆ ಆದೇಶವನ್ನು ನೀಡಲಾಗುತ್ತದೆ. ಕಪ್ಪನ್ ಈ ವಾರ ಜೈಲಿನಿಂದ ಹೊರಬರಬಹುದು” ಎಂದು ಕಪ್ಪನ್ ಅವರ ವಕೀಲ ಡ್ಯಾನಿಶ್ ಹೇಳಿದ್ದಾರೆ.

ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣವನ್ನು ಸುದ್ದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಸಿದ್ದಿಕ್ ಕಪ್ಪನ್ ಮತ್ತು ಇತರ ನಾಲ್ವರನ್ನು 2020ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಈ ವೇಳೆ ಅವರ ವಿರುದ್ಧ, ‘ಕೋಮು ಗಲಭೆಗಳ ಕುರಿತು ವರದಿ ಮಾಡಿದ್ದಾರೆ’ ಮತ್ತು ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯು ಅವರ ವಿರುದ್ಧ ಪ್ರಕರಣದಲ್ಲಿ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, “ಅವರು ಮುಸ್ಲಿಮರ ಬಗ್ಗೆ ಮಾತ್ರ ವರದಿ ಮಾಡಿದ್ದಾರೆ” ಎಂದು ಹೇಳಿದ್ದರು. ಜೊತೆಗೆ ಸೆಕ್ಷನ್ 124A (ದೇಶದ್ರೋಹ), 153A (ಹಗೆತನವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ), UAPA, PMLA, ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಪೊಲೀಸರು ಆರೋಪ ಹೊರಿಸಿದ್ದಾರೆ.

ಅವರ ಬಂಧನ ನಡೆದ ವೇಳೆ ಅವರ ಜೊತೆಗೆ ಪ್ರಯಾಣಿಸಿದ ಕಾರಿನ ಚಾಲಕ ಮೊಹಮ್ಮದ್ ಆಲಂ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ಆಗಸ್ಟ್‌ನಲ್ಲಿ ಜಾಮೀನು ಪಡೆದಿದ್ದಾರೆ. ಅವರ ವಶದಿಂದ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲವಾದರೂ, ಅವರು ಇನ್ನೂ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...