Homeಮುಖಪುಟಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

ಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿತ್ತು. ಆದರೆ, ಕೋರ್ಟ್‌ ಅವರಿಗೆ ಜಾಮೀನು ನೀಡಿ ವಾರಗಳು ಕಳೆದರೂ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ. 2022ರ ಡಿಸೆಂಬರ್‌ 23ರಂದು ಜಾಮೀನು ಆದೇಶವನ್ನು ಅಂಗೀಕರಿಸಲಾಗಿದ್ದರೂ, ಅವರ ಜಾಮೀನು ಶ್ಯೂರಿಟಿಯನ್ನು ಇನ್ನೂ ಪರಿಶೀಲಿಸಲಾಗಿಲ್ಲ.

ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ವಿರುದ್ಧ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅವರಿಗೆ 2022ರ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಾಲಯದ ಮುಂದೆ ಪಿಎಂಎಲ್‌ಎ ಪ್ರಕರಣದಲ್ಲಿ ಜಾಮೀನು ಶ್ಯೂರಿಟಿಗಳನ್ನು ಈಗಾಗಲೇ ಸಲ್ಲಿಸಿದ್ದೇವೆ ಎಂದು ಕಪ್ಪನ್‌ ಅವರನ್ನು ಪ್ರತಿನಿಧಿಸುವ ವಕೀಲರಲ್ಲಿ ಒಬ್ಬರಾದ ವಕೀಲ ಮೊಹಮ್ಮದ್ ಡ್ಯಾನಿಶ್ ಕೆ.ಎಸ್. ಹೇಳಿದ್ದಾರೆ.

“ನಾವು ಶ್ಯೂರಿಟಿಯ ಪರಿಶೀಲನೆಗಾಗಿ ಕಾಯುತ್ತಿದ್ದೇವೆ. ಅವುಗಳನ್ನು ಸ್ಥಳೀಯ ಅಧಿಕಾರಿಗಳು ಪರಿಶೀಲಿಸಬೇಕಾಗಿದ್ದು, ಇದು ಸಾಮಾನ್ಯವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಜಾಮೀನು ಷರತ್ತುಗಳನ್ನು ನಿಗದಿಪಡಿಸುವ ವೇಳೆ, ಯುಎಪಿಎ ಪ್ರಕರಣದ ಜಾಮೀನು ಶ್ಯೂರಿಟಿಗಳನ್ನು ಪರಿಶೀಲಿಸುವಲ್ಲಿ ಮೂರು ತಿಂಗಳಿಗೂ ಹೆಚ್ಚಿನ ವಿಳಂಬವಾಗಿದೆ ಎಂದು ನಾವು ನ್ಯಾಯಾಲಯಕ್ಕೆ ನೆನಪಿಸಿದ್ದೇವೆ” ಎಂದು ಡ್ಯಾನಿಶ್‌ ಅವರು ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ಜಾಮೀನು ಪಡೆದಾಗ ಸಿದ್ದಿಕ್ ಕಪ್ಪನ್ ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅಷ್ಟೆ ಮೊತ್ತದ ವೈಯಕ್ತಿಕ ಬಾಂಡ್ ನೀಡುವಂತೆ ಕೇಳಲಾಗಿತ್ತು. ಪ್ರಸ್ತುತ ಪ್ರಕರಣವು ಸಹ ಇದೇ ರೀತಿಯಲ್ಲಿ ಇದ್ದು, ಕಪ್ಪನ್ ಅವರು ತಲಾ 1 ಲಕ್ಷ ರೂಪಾಯಿಗಳ ಎರಡು ಸ್ಥಳೀಯ ಶ್ಯೂರಿಟಿಗಳು ಮತ್ತು ವೈಯಕ್ತಿಕ ಬಾಂಡ್ ಅನ್ನು ಒದಗಿಸಬೇಕಾಗಿದೆ.

“ಪಿಎಂಎಲ್‌ಎ ಪ್ರಕರಣದಲ್ಲಿ ನಾವು ನ್ಯಾಯಾಲಯದ ಮುಂದೆ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದಾಗ, ಇತರ ಪ್ರಕರಣದಲ್ಲಿನ ವಿಳಂಬವನ್ನು ಪರಿಗಣಿಸಿ ಪರಿಶೀಲನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಾಲಯವು ನಮಗೆ ಭರವಸೆ ನೀಡಿತು. ಆದರೆ ಶ್ಯೂರಿಟಿಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ”

“ಯಾಕೆಂದರೆ ಹಲವು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅದು ನ್ಯಾಯಾಲಯದ ನಿಯಂತ್ರಣದಲ್ಲಿಲ್ಲ. ಪರಿಶೀಲನೆ ಇಂದು (ಜನವರಿ 30ರ ಸೋಮವಾರ) ಅಥವಾ ನಾಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಂತರ ಜಾಮೀನು ಬಾಂಡ್ ಮತ್ತು ಬಿಡುಗಡೆ ಆದೇಶವನ್ನು ನೀಡಲಾಗುತ್ತದೆ. ಕಪ್ಪನ್ ಈ ವಾರ ಜೈಲಿನಿಂದ ಹೊರಬರಬಹುದು” ಎಂದು ಕಪ್ಪನ್ ಅವರ ವಕೀಲ ಡ್ಯಾನಿಶ್ ಹೇಳಿದ್ದಾರೆ.

ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣವನ್ನು ಸುದ್ದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಸಿದ್ದಿಕ್ ಕಪ್ಪನ್ ಮತ್ತು ಇತರ ನಾಲ್ವರನ್ನು 2020ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಈ ವೇಳೆ ಅವರ ವಿರುದ್ಧ, ‘ಕೋಮು ಗಲಭೆಗಳ ಕುರಿತು ವರದಿ ಮಾಡಿದ್ದಾರೆ’ ಮತ್ತು ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯು ಅವರ ವಿರುದ್ಧ ಪ್ರಕರಣದಲ್ಲಿ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, “ಅವರು ಮುಸ್ಲಿಮರ ಬಗ್ಗೆ ಮಾತ್ರ ವರದಿ ಮಾಡಿದ್ದಾರೆ” ಎಂದು ಹೇಳಿದ್ದರು. ಜೊತೆಗೆ ಸೆಕ್ಷನ್ 124A (ದೇಶದ್ರೋಹ), 153A (ಹಗೆತನವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ), UAPA, PMLA, ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಪೊಲೀಸರು ಆರೋಪ ಹೊರಿಸಿದ್ದಾರೆ.

ಅವರ ಬಂಧನ ನಡೆದ ವೇಳೆ ಅವರ ಜೊತೆಗೆ ಪ್ರಯಾಣಿಸಿದ ಕಾರಿನ ಚಾಲಕ ಮೊಹಮ್ಮದ್ ಆಲಂ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ಆಗಸ್ಟ್‌ನಲ್ಲಿ ಜಾಮೀನು ಪಡೆದಿದ್ದಾರೆ. ಅವರ ವಶದಿಂದ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲವಾದರೂ, ಅವರು ಇನ್ನೂ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...