Homeಮುಖಪುಟಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

ಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿತ್ತು. ಆದರೆ, ಕೋರ್ಟ್‌ ಅವರಿಗೆ ಜಾಮೀನು ನೀಡಿ ವಾರಗಳು ಕಳೆದರೂ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ. 2022ರ ಡಿಸೆಂಬರ್‌ 23ರಂದು ಜಾಮೀನು ಆದೇಶವನ್ನು ಅಂಗೀಕರಿಸಲಾಗಿದ್ದರೂ, ಅವರ ಜಾಮೀನು ಶ್ಯೂರಿಟಿಯನ್ನು ಇನ್ನೂ ಪರಿಶೀಲಿಸಲಾಗಿಲ್ಲ.

ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ವಿರುದ್ಧ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅವರಿಗೆ 2022ರ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಾಲಯದ ಮುಂದೆ ಪಿಎಂಎಲ್‌ಎ ಪ್ರಕರಣದಲ್ಲಿ ಜಾಮೀನು ಶ್ಯೂರಿಟಿಗಳನ್ನು ಈಗಾಗಲೇ ಸಲ್ಲಿಸಿದ್ದೇವೆ ಎಂದು ಕಪ್ಪನ್‌ ಅವರನ್ನು ಪ್ರತಿನಿಧಿಸುವ ವಕೀಲರಲ್ಲಿ ಒಬ್ಬರಾದ ವಕೀಲ ಮೊಹಮ್ಮದ್ ಡ್ಯಾನಿಶ್ ಕೆ.ಎಸ್. ಹೇಳಿದ್ದಾರೆ.

“ನಾವು ಶ್ಯೂರಿಟಿಯ ಪರಿಶೀಲನೆಗಾಗಿ ಕಾಯುತ್ತಿದ್ದೇವೆ. ಅವುಗಳನ್ನು ಸ್ಥಳೀಯ ಅಧಿಕಾರಿಗಳು ಪರಿಶೀಲಿಸಬೇಕಾಗಿದ್ದು, ಇದು ಸಾಮಾನ್ಯವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಜಾಮೀನು ಷರತ್ತುಗಳನ್ನು ನಿಗದಿಪಡಿಸುವ ವೇಳೆ, ಯುಎಪಿಎ ಪ್ರಕರಣದ ಜಾಮೀನು ಶ್ಯೂರಿಟಿಗಳನ್ನು ಪರಿಶೀಲಿಸುವಲ್ಲಿ ಮೂರು ತಿಂಗಳಿಗೂ ಹೆಚ್ಚಿನ ವಿಳಂಬವಾಗಿದೆ ಎಂದು ನಾವು ನ್ಯಾಯಾಲಯಕ್ಕೆ ನೆನಪಿಸಿದ್ದೇವೆ” ಎಂದು ಡ್ಯಾನಿಶ್‌ ಅವರು ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ಜಾಮೀನು ಪಡೆದಾಗ ಸಿದ್ದಿಕ್ ಕಪ್ಪನ್ ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅಷ್ಟೆ ಮೊತ್ತದ ವೈಯಕ್ತಿಕ ಬಾಂಡ್ ನೀಡುವಂತೆ ಕೇಳಲಾಗಿತ್ತು. ಪ್ರಸ್ತುತ ಪ್ರಕರಣವು ಸಹ ಇದೇ ರೀತಿಯಲ್ಲಿ ಇದ್ದು, ಕಪ್ಪನ್ ಅವರು ತಲಾ 1 ಲಕ್ಷ ರೂಪಾಯಿಗಳ ಎರಡು ಸ್ಥಳೀಯ ಶ್ಯೂರಿಟಿಗಳು ಮತ್ತು ವೈಯಕ್ತಿಕ ಬಾಂಡ್ ಅನ್ನು ಒದಗಿಸಬೇಕಾಗಿದೆ.

“ಪಿಎಂಎಲ್‌ಎ ಪ್ರಕರಣದಲ್ಲಿ ನಾವು ನ್ಯಾಯಾಲಯದ ಮುಂದೆ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದಾಗ, ಇತರ ಪ್ರಕರಣದಲ್ಲಿನ ವಿಳಂಬವನ್ನು ಪರಿಗಣಿಸಿ ಪರಿಶೀಲನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಾಲಯವು ನಮಗೆ ಭರವಸೆ ನೀಡಿತು. ಆದರೆ ಶ್ಯೂರಿಟಿಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ”

“ಯಾಕೆಂದರೆ ಹಲವು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅದು ನ್ಯಾಯಾಲಯದ ನಿಯಂತ್ರಣದಲ್ಲಿಲ್ಲ. ಪರಿಶೀಲನೆ ಇಂದು (ಜನವರಿ 30ರ ಸೋಮವಾರ) ಅಥವಾ ನಾಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಂತರ ಜಾಮೀನು ಬಾಂಡ್ ಮತ್ತು ಬಿಡುಗಡೆ ಆದೇಶವನ್ನು ನೀಡಲಾಗುತ್ತದೆ. ಕಪ್ಪನ್ ಈ ವಾರ ಜೈಲಿನಿಂದ ಹೊರಬರಬಹುದು” ಎಂದು ಕಪ್ಪನ್ ಅವರ ವಕೀಲ ಡ್ಯಾನಿಶ್ ಹೇಳಿದ್ದಾರೆ.

ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣವನ್ನು ಸುದ್ದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಸಿದ್ದಿಕ್ ಕಪ್ಪನ್ ಮತ್ತು ಇತರ ನಾಲ್ವರನ್ನು 2020ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಈ ವೇಳೆ ಅವರ ವಿರುದ್ಧ, ‘ಕೋಮು ಗಲಭೆಗಳ ಕುರಿತು ವರದಿ ಮಾಡಿದ್ದಾರೆ’ ಮತ್ತು ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯು ಅವರ ವಿರುದ್ಧ ಪ್ರಕರಣದಲ್ಲಿ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, “ಅವರು ಮುಸ್ಲಿಮರ ಬಗ್ಗೆ ಮಾತ್ರ ವರದಿ ಮಾಡಿದ್ದಾರೆ” ಎಂದು ಹೇಳಿದ್ದರು. ಜೊತೆಗೆ ಸೆಕ್ಷನ್ 124A (ದೇಶದ್ರೋಹ), 153A (ಹಗೆತನವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ), UAPA, PMLA, ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಪೊಲೀಸರು ಆರೋಪ ಹೊರಿಸಿದ್ದಾರೆ.

ಅವರ ಬಂಧನ ನಡೆದ ವೇಳೆ ಅವರ ಜೊತೆಗೆ ಪ್ರಯಾಣಿಸಿದ ಕಾರಿನ ಚಾಲಕ ಮೊಹಮ್ಮದ್ ಆಲಂ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ಆಗಸ್ಟ್‌ನಲ್ಲಿ ಜಾಮೀನು ಪಡೆದಿದ್ದಾರೆ. ಅವರ ವಶದಿಂದ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲವಾದರೂ, ಅವರು ಇನ್ನೂ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...