Homeಮುಖಪುಟಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

ಜಾಮೀನು ಸಿಕ್ಕಿ ವಾರಗಳಾದರೂ ಬಿಡುಗಡೆಯಾಗದ ಪತ್ರಕರ್ತ ಸಿದ್ದೀಕ್ ಕಪ್ಪನ್!

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು ನೀಡಿತ್ತು. ಆದರೆ, ಕೋರ್ಟ್‌ ಅವರಿಗೆ ಜಾಮೀನು ನೀಡಿ ವಾರಗಳು ಕಳೆದರೂ ಅವರು ಇನ್ನೂ ಜೈಲಿನಲ್ಲೇ ಇದ್ದಾರೆ. 2022ರ ಡಿಸೆಂಬರ್‌ 23ರಂದು ಜಾಮೀನು ಆದೇಶವನ್ನು ಅಂಗೀಕರಿಸಲಾಗಿದ್ದರೂ, ಅವರ ಜಾಮೀನು ಶ್ಯೂರಿಟಿಯನ್ನು ಇನ್ನೂ ಪರಿಶೀಲಿಸಲಾಗಿಲ್ಲ.

ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ವಿರುದ್ಧ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆ ಅಡಿಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅವರಿಗೆ 2022ರ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಾಲಯದ ಮುಂದೆ ಪಿಎಂಎಲ್‌ಎ ಪ್ರಕರಣದಲ್ಲಿ ಜಾಮೀನು ಶ್ಯೂರಿಟಿಗಳನ್ನು ಈಗಾಗಲೇ ಸಲ್ಲಿಸಿದ್ದೇವೆ ಎಂದು ಕಪ್ಪನ್‌ ಅವರನ್ನು ಪ್ರತಿನಿಧಿಸುವ ವಕೀಲರಲ್ಲಿ ಒಬ್ಬರಾದ ವಕೀಲ ಮೊಹಮ್ಮದ್ ಡ್ಯಾನಿಶ್ ಕೆ.ಎಸ್. ಹೇಳಿದ್ದಾರೆ.

“ನಾವು ಶ್ಯೂರಿಟಿಯ ಪರಿಶೀಲನೆಗಾಗಿ ಕಾಯುತ್ತಿದ್ದೇವೆ. ಅವುಗಳನ್ನು ಸ್ಥಳೀಯ ಅಧಿಕಾರಿಗಳು ಪರಿಶೀಲಿಸಬೇಕಾಗಿದ್ದು, ಇದು ಸಾಮಾನ್ಯವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಜಾಮೀನು ಷರತ್ತುಗಳನ್ನು ನಿಗದಿಪಡಿಸುವ ವೇಳೆ, ಯುಎಪಿಎ ಪ್ರಕರಣದ ಜಾಮೀನು ಶ್ಯೂರಿಟಿಗಳನ್ನು ಪರಿಶೀಲಿಸುವಲ್ಲಿ ಮೂರು ತಿಂಗಳಿಗೂ ಹೆಚ್ಚಿನ ವಿಳಂಬವಾಗಿದೆ ಎಂದು ನಾವು ನ್ಯಾಯಾಲಯಕ್ಕೆ ನೆನಪಿಸಿದ್ದೇವೆ” ಎಂದು ಡ್ಯಾನಿಶ್‌ ಅವರು ಹೇಳಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ಜಾಮೀನು ಪಡೆದಾಗ ಸಿದ್ದಿಕ್ ಕಪ್ಪನ್ ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅಷ್ಟೆ ಮೊತ್ತದ ವೈಯಕ್ತಿಕ ಬಾಂಡ್ ನೀಡುವಂತೆ ಕೇಳಲಾಗಿತ್ತು. ಪ್ರಸ್ತುತ ಪ್ರಕರಣವು ಸಹ ಇದೇ ರೀತಿಯಲ್ಲಿ ಇದ್ದು, ಕಪ್ಪನ್ ಅವರು ತಲಾ 1 ಲಕ್ಷ ರೂಪಾಯಿಗಳ ಎರಡು ಸ್ಥಳೀಯ ಶ್ಯೂರಿಟಿಗಳು ಮತ್ತು ವೈಯಕ್ತಿಕ ಬಾಂಡ್ ಅನ್ನು ಒದಗಿಸಬೇಕಾಗಿದೆ.

“ಪಿಎಂಎಲ್‌ಎ ಪ್ರಕರಣದಲ್ಲಿ ನಾವು ನ್ಯಾಯಾಲಯದ ಮುಂದೆ ಜಾಮೀನು ಷರತ್ತುಗಳನ್ನು ನಿಗದಿಪಡಿಸಿದಾಗ, ಇತರ ಪ್ರಕರಣದಲ್ಲಿನ ವಿಳಂಬವನ್ನು ಪರಿಗಣಿಸಿ ಪರಿಶೀಲನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ನ್ಯಾಯಾಲಯವು ನಮಗೆ ಭರವಸೆ ನೀಡಿತು. ಆದರೆ ಶ್ಯೂರಿಟಿಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ”

“ಯಾಕೆಂದರೆ ಹಲವು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅದು ನ್ಯಾಯಾಲಯದ ನಿಯಂತ್ರಣದಲ್ಲಿಲ್ಲ. ಪರಿಶೀಲನೆ ಇಂದು (ಜನವರಿ 30ರ ಸೋಮವಾರ) ಅಥವಾ ನಾಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಂತರ ಜಾಮೀನು ಬಾಂಡ್ ಮತ್ತು ಬಿಡುಗಡೆ ಆದೇಶವನ್ನು ನೀಡಲಾಗುತ್ತದೆ. ಕಪ್ಪನ್ ಈ ವಾರ ಜೈಲಿನಿಂದ ಹೊರಬರಬಹುದು” ಎಂದು ಕಪ್ಪನ್ ಅವರ ವಕೀಲ ಡ್ಯಾನಿಶ್ ಹೇಳಿದ್ದಾರೆ.

ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ ಪ್ರಕರಣವನ್ನು ಸುದ್ದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಸಿದ್ದಿಕ್ ಕಪ್ಪನ್ ಮತ್ತು ಇತರ ನಾಲ್ವರನ್ನು 2020ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಈ ವೇಳೆ ಅವರ ವಿರುದ್ಧ, ‘ಕೋಮು ಗಲಭೆಗಳ ಕುರಿತು ವರದಿ ಮಾಡಿದ್ದಾರೆ’ ಮತ್ತು ಬಲಪಂಥೀಯ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯು ಅವರ ವಿರುದ್ಧ ಪ್ರಕರಣದಲ್ಲಿ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, “ಅವರು ಮುಸ್ಲಿಮರ ಬಗ್ಗೆ ಮಾತ್ರ ವರದಿ ಮಾಡಿದ್ದಾರೆ” ಎಂದು ಹೇಳಿದ್ದರು. ಜೊತೆಗೆ ಸೆಕ್ಷನ್ 124A (ದೇಶದ್ರೋಹ), 153A (ಹಗೆತನವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ), UAPA, PMLA, ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಜೊತೆಗೆ ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಪೊಲೀಸರು ಆರೋಪ ಹೊರಿಸಿದ್ದಾರೆ.

ಅವರ ಬಂಧನ ನಡೆದ ವೇಳೆ ಅವರ ಜೊತೆಗೆ ಪ್ರಯಾಣಿಸಿದ ಕಾರಿನ ಚಾಲಕ ಮೊಹಮ್ಮದ್ ಆಲಂ ಅವರು ಅಲಹಾಬಾದ್ ಹೈಕೋರ್ಟ್‌ನಿಂದ ಆಗಸ್ಟ್‌ನಲ್ಲಿ ಜಾಮೀನು ಪಡೆದಿದ್ದಾರೆ. ಅವರ ವಶದಿಂದ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲವಾದರೂ, ಅವರು ಇನ್ನೂ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹಿಂಡನ್‌ಬರ್ಗ್‌ ವರದಿ: ಭಾರತದ ಮೇಲಿನ ದಾಳಿ ಎಂದ ಅದಾನಿ; ರಾಷ್ಟ್ರೀಯತೆ ಹೆಸರಿನಲ್ಲಿ ವಂಚನೆ ಮರೆಯಾಗಿಸಬೇಡಿ ಎಂದ ಸಂಶೋಧನಾ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...