Homeಮುಖಪುಟಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

- Advertisement -
- Advertisement -

2008ರಲ್ಲಿ ನಡೆದಿದ್ದ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಾಲ್ವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ನೇತೃತ್ವದ ಪೀಠವು ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಸಿಂಗ್ ಮಲಿಕ್ ಮತ್ತು ಅಜಯ್ ಕುಮಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಅಪರಾಧ ಮತ್ತು ಶಿಕ್ಷೆಯನ್ನು ಪ್ರಶ್ನಿಸಿದ್ದ ಅವರ ಮೇಲ್ಮನವಿಗಳ ಬಾಕಿ ಇರುವವರೆಗೆ ಶಿಕ್ಷೆಯನ್ನು ಕೋರ್ಟ್‌ ರದ್ದುಪಡಿಸಿದೆ.

ನ್ಯಾಯಮೂರ್ತಿ ಗಿರೀಶ್ ಕತ್ಪಾಲಿಯಾ ಅವರನ್ನೊಳಗೊಂಡ ಪೀಠವು, ನಾಲ್ವರು ಅಪರಾಧಿಗಳು ಈಗಾಗಲೇ 14 ವರ್ಷ ಮತ್ತು 9 ತಿಂಗಳ ಕಾಲ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಗಮನಿಸಿದೆ. ನಾಲ್ವರು ಅಪರಾಧಿಗಳು ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

2008ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ  ಹದಿನೈದು ವರ್ಷಗಳ ನಂತರ ಕಳೆದ ವರ್ಷ ಅಕ್ಟೋಬರ್ 18ರಂದು ದೆಹಲಿ ನ್ಯಾಯಾಲಯವು ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಅಪರಾಧಿಗಳೆಂದು ಘೋಷಿಸಿತ್ತು. ಪ್ರಾಸಿಕ್ಯೂಷನ್ ಎಲ್ಲಾ ಸಮಂಜಸವಾದ ಅನುಮಾನಗಳನ್ನು ಮೀರಿ ಅಪರಾಧವನ್ನು ಸರಿಯಾಗಿ ಸಾಬೀತುಪಡಿಸಿದೆ ಎಂದು ಕೋರ್ಟ್‌ ಹೇಳಿದೆ.

ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್ ಮತ್ತು ಬಲ್ಜೀತ್ ಮಲಿಕ್ ಎಂಬ ನಾಲ್ವರು ಅಪರಾಧಿಗಳ ವಿರುದ್ಧ 302 (ಕೊಲೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಮಾಡಿದ ಅಪರಾಧ)  ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಅವರಿಗೆ  ಶಿಕ್ಷೆ ವಿಧಿಸಲಾಗಿತ್ತು. ಇದಲ್ಲದೆ ಪ್ರಕರಣದ ಐದನೇ ಅಪರಾಧಿ ಅಜಯ್ ಸೇಥಿ ದರೋಡೆ ಮಾಡಿದ ಸೊತ್ತು ಪಡೆದ ಅಪರಾಧಕ್ಕೆ ಶಿಕ್ಷೆಗೆ ಗುರಿಯಾಗಿದ್ದಾನೆ. ಸಂಘಟಿತ ಅಪರಾಧ ಮತ್ತು ನಿರಂತರ ಕಾನೂನುಬಾಹಿರ ಚಟುವಟಿಕೆಯ ಹಿಂದಿನ ಒಳಗೊಳ್ಳುವಿಕೆಯ ಆಧಾರದ ಮೇಲೆ ವಿಧಿಸಲಾದ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ಕಠಿಣ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಸೇಥಿ ಸೇರಿದಂತೆ ಎಲ್ಲಾ ಐವರು ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ.

ಸೆಪ್ಟೆಂಬರ್ 30, 2008ರಲ್ಲಿ ಬೆಳಿಗ್ಗೆ 3.25 ರಿಂದ 3.55ರ ನಡುವೆ ದೆಹಲಿಯ ವಸಂತ ವಿಹಾರ್ ಕಡೆಯಿಂದ ವಸಂತ್ ಕುಂಜ್ ಕಡೆಗೆ ಹೋಗುವ ರಸ್ತೆಯಲ್ಲಿ ಅಪರಾಧಿಗಳು ಪತ್ರಕರ್ತೆ ಸೌಮ್ಯಾಳನ್ನು ದರೋಡೆ ಮಾಡುವ ಉದ್ದೇಶದಿಂದ ಗುಂಡು ಹಾರಿಸಿದ್ದರು. ಪ್ರಮುಖ ಇಂಗ್ಲೀಷ್ ನ್ಯೂಸ್ ಚಾನೆಲ್‌ನಲ್ಲಿ ಸೌಮ್ಯಾ ಅವರು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅವರನ್ನು ದಕ್ಷಿಣ ದಿಲ್ಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ 2008 ಸೆಪ್ಟಂಬರ್ 30ರಂದು ಮುಂಜಾನೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ಇದನ್ನು ಓದಿ: ರಾಜಸ್ಥಾನ: ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ನೀರಿನ ಟ್ಯಾಂಕ್ ಏರಿದ ದಲಿತ ಮಹಿಳೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...