Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...