Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...