Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...