Homeಮುಖಪುಟನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ...

ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

- Advertisement -
- Advertisement -

ಪತ್ರಕರ್ತರು, ಹಲವು ನೆಟ್ಟಿಗರು ಚಿತ್ರ ನಟಿಯರ ಬಗ್ಗೆ ಮನಸ್ಸಿಗೆ ಬಂದಂತೆ ಬರೆಯುವುದು, ಪ್ರಶ್ನಾರ್ಥಕ ಚಿಹ್ನೆ ಹಾಕಿ ತಮ್ಮ ಮನಸ್ಸಿನಲ್ಲಿರುವ ಕಹಿಯನ್ನು ಕಾರಿಕೊಳ್ಳುವುದು ನೋಡುತ್ತಲೇ ಇದ್ದೇವೆ. ಇದೆ ಸಾಲಿಗೆ ಮತ್ತೊಬ್ಬ ಸಿನಿಮಾ ಪರ್ತಕರ್ತನ ಸೇರ್ಪಡೆಯಾಗಿದೆ. ತೆಲುಗಿನ ’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಪತ್ರಕರ್ತ ಸುರೇಶ್ ಕೊಂಡೆಟಿ, ನಟ ಸಿದ್ದು ಜೊನ್ನಲಗಡ್ಡ ಅವರಿಗೆ ಅಸಭ್ಯ ಪ್ರಶ್ನೆಯನ್ನು ಹಾಕಿ ವಿವಾದಕ್ಕೆ ಕಾರಣರಾಗಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಸಿನಿಮಾದ ನಾಯಕ ನಟನಿಗೆ ಪ್ರಶ್ನೆ ಮಾಡಿದ ಸಿನಿಮಾ ಪತ್ರಕರ್ತ, “ಟ್ರೇಲರ್‌ನಲ್ಲಿ ಹೇಳಿರುವಂತೆಯೇ, ನಿಜವಾಗಿಯೂ ನಾಯಕಿ ದೇಹದಲ್ಲಿರುವ ಹುಟ್ಟು ಮಚ್ಚೆಗಳನ್ನು ಎಣಿಸಿದ್ದಿರಾ..?” ಎಂದ ಅಸಭ್ಯವಾಗಿ  ಪ್ರಶ್ನಿಸಿದ್ದಾರೆ.

’ಡಿಜೆ ಟಿಲ್ಲು’ ಚಿತ್ರದ ಟ್ರೇಲರ್‌ನಲ್ಲಿ, ನಾಯಕನು ನಾಯಕಿ ನೇಹಾ ಶೆಟ್ಟಿಗೆ “ನಿಮಗೆ ಎಷ್ಟು ಮಚ್ಚೆಗಳಿವೆ?” ಎಂದು ಕೇಳುತ್ತಾರೆ. ಅದಕ್ಕೆ ಆಕೆ 16 ಎಂದು ಉತ್ತರಿಸುತ್ತಾರೆ. ಇದು ಸಿನಿಮಾದ ದೃಶ್ಯವಾಗಿದೆ. ಆದರೆ, ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಕೊಂಡೆಟಿ, “ನಿಜ ಜೀವನದಲ್ಲಿ ಅವರಿಗೆ ಎಷ್ಟು ಮಚ್ಚೆಗಳಿವೆ ಎಂದು ನೀವು ಎಣಿಸಿದ್ದೀರಾ?” ಎಂದು ನಾಯಕನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಲು ಸಿದ್ದು ನಯವಾಗಿ ನಿರಾಕರಿಸಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ಈ ಸಂವೇದನಾರಹಿತ ಪ್ರಶ್ನೆಯನ್ನು ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿಸಿರುವ ನಟಿ ನೇಹಾ ಶೆಟ್ಟಿ, “ಇಂದು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಈ ಪ್ರಶ್ನೆ ದುರದೃಷ್ಟಕರವಾಗಿತ್ತು. ಆದರೆ, ಇದು ತನ್ನ ಕೆಲಸದ ಸ್ಥಳದಲ್ಲಿ ಮತ್ತು ಮನೆಯಲ್ಲಿ ತನ್ನ ಸುತ್ತಲಿನ ಮಹಿಳೆಯರ ಬಗ್ಗೆ ಆತ ಹೊಂದಿರುವ ಗೌರವವನ್ನು ವ್ಯಕ್ತಪಡಿಸುತ್ತದೆ”ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಚಿತ್ರದ ನಟ ಸಿದ್ದು ಕೂಡ ಈ ಘಟನೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರೊಮ್ಯಾಂಟಿಕ್ ದೃಶ್ಯಗಳನ್ನು ಚಿತ್ರಿಸುವಾಗ ನಟರಿಗಾಗುವ, ಅದರಲ್ಲೂ ಮಹಿಳಾ ಕಲಾವಿದರಿಗಾಗುವ ಒತ್ತಡಗಳ ಬಗ್ಗೆ ತಿಳಿಸಿದ್ದಾರೆ. ನೂರಾರು ಜನರ ಮಧ್ಯೆ ನಟಿಸುವಾಗ ಎದುರಿಸುವ ಸಂಕಟಗಳ ಬಗ್ಗೆ ಅರಿತು ಮಾತಾಡಬೇಕು. ಕಲಾವಿದರಿಗೆ ಗೌರವ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಪತ್ರಕರ್ತನ ನಡೆಯನ್ನು ನೆಟ್ಟಿಗರು ಸೇರಿದಂತೆ ಹಲವು ಮಂದಿ ಖಂಡಿಸಿದ ಬಳಿಕ ಸುರೇಶ್ ಕೊಂಡೆಟಿ ಕ್ಷಮೆಯಾಚಿಸಿದ್ದಾರೆ. ಪ್ರಶ್ನೆಯ ಹಿಂದಿನ ಉದ್ದೇಶದಲ್ಲಿ ಯಾವುದೇ ತಪ್ಪು ಇರಲಿಲ್ಲ ಎಂದಿದ್ದಾರೆ.

“ಇದು ರೊಮ್ಯಾಂಟಿಕ್ ಚಿತ್ರ, ನಾನು ರೊಮ್ಯಾಂಟಿಕ್ ಪ್ರಶ್ನೆಯನ್ನು ಕೇಳಿದೆ. ನನ್ನ ಉದ್ದೇಶ ತುಂಬಾ ಕ್ಲಿನ್ ಆಗಿತ್ತು. ಅದರಲ್ಲಿ ಡಬಲ್ ಮೀನಿಂಗ್ ಇಲ್ಲ. ದಯವಿಟ್ಟು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಡಿಜೆ ಟಿಲ್ಲು ಟ್ರೈಲರ್ ಅತ್ಯುತ್ತಮವಾಗಿದೆ. ಪ್ರೀತಿಯ ಜೋಡಿಗೆ ಆಲ್ ದಿ ಬೆಸ್ಟ್” ಎಂದು ಚಿತ್ರದ ನಾಯಕ, ನಾಯಕಿಯನ್ನು ಟ್ಯಾಗ್ ಮಾಡಿದ್ದಾರೆ.

ನೇಹಾ ಶೆಟ್ಟಿ ಬಹುಭಾಷಾ ನಟಿ ಮತ್ತು ರೂಪದರ್ಶಿ. 2014 ರ ಮಿಸ್ ಮಂಗಳೂರು, 2015 ರ ಮಿಸ್ ಸೌತ್-ಇಂಡಿಯಾ ಸ್ಪರ್ಧೆಯಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. 2016 ರಲ್ಲಿ ತೆರೆಕಂಡ ಕನ್ನಡದ ಬಹು ನಿರೀಕ್ಷಿತ ಚಿತ್ರವಾಗಿದ್ದ ಮುಂಗಾರು ಮಳೆ- 2 ನಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸದ್ಯ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...