Homeಮುಖಪುಟಮಣಿಪುರ ಹಿಂಸಾಚಾರ: ಬಿಜೆಪಿಯನ್ನು ಪ್ರಶ್ನಿಸಿ ಲೇಖನ ಬರೆದಿದ್ದ ಪತ್ರಕರ್ತನ ಬಂಧನ

ಮಣಿಪುರ ಹಿಂಸಾಚಾರ: ಬಿಜೆಪಿಯನ್ನು ಪ್ರಶ್ನಿಸಿ ಲೇಖನ ಬರೆದಿದ್ದ ಪತ್ರಕರ್ತನ ಬಂಧನ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಕುಕಿ ಸಮುದಯಕ್ಕೆ ಬಿಜೆಪಿಯ ಬೆಂಬವಿದೆಯೇ ಎಂದು ಪ್ರಶ್ನಿಸಿ ಲೇಖನವನ್ನು ಬರದಿದ್ದ ಪತ್ರಕರ್ತ ವಾಂಗ್‌ಖೇಮ್‌ಚಾ ಶ್ಯಾಮ್‌ಜೈ ಅವರನ್ನು ಮಣಿಪುರ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪ ಹೊರಿಸಲಾಗಿದೆ.

‘ದಿ ಫ್ರಾಂಟಿಯರ್ ಮಣಿಪುರ’ ಪತ್ರಕರ್ತನ ಬಂಧನದ ಬಗ್ಗೆ ವರದಿಯನ್ನು ಮಾಡಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಲೈಶ್ರಾಮ್ ಮೀನಬಂಟ ಸಿಂಗ್ ಅವರ ದೂರಿನ ಮೇರೆಗೆ ಪೊಲೀಸರು ಡಿ.2ರಂದು ‘ಕಂಗ್ಲೇಪಕ್ಕಿ ಮೀರಾ’ ಪತ್ರಿಕೆಯ ಸಂಪಾದಕ ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದರು.

ರಾಜ್ಯದಲ್ಲಿ ಕುಕಿ ಸಶಸ್ತ್ರ ಗುಂಪಿಗೆ ದುಷ್ಕೃತ್ಯವನ್ನು ನಡೆಸಲು ಆಡಳಿತಾರೂಢ ಬಿಜೆಪಿ ಸರ್ಕಾರದ ಬೆಂಬಲವಿದೆಯೇ ಎಂದು ಲೇಖನದಲ್ಲಿ ಪ್ರಶ್ನಿಸಲಾಗಿತ್ತು. ಶ್ಯಾಮ್‌ಜೈ ಅವರ ಲೇಖನವು ಮಣಿಪುರದಲ್ಲಿ ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಲೈಶ್ರಾಮ್ ಮೀನಾಬಂಟ ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಗಲಭೆಗೆ ಪ್ರಚೋದನೆ ನೀಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶ್ಯಾಮ್‌ಜೈ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಅವರನ್ನು ಭಾನುವಾರದವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಶ್ಯಾಮ್‌ಜೈ ಅವರ ಬಂಧನವನ್ನು ಮಣಿಪುರ ಕಾಂಗ್ರೆಸ್‌ ಮುಖ್ಯಸ್ಥ ಕೇಶಾಮ್ ಮೇಘಚಂದ್ರ ಅವರು ಖಂಡಿಸಿದ್ದು, ಇದು ಮಾದ್ಯಮ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ಅನ್ಯಾಯದ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ.

ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ.

ಇದನ್ನು ಓದಿ: ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ತ್ವರಿತ ಜಾರಿಗೆ ಮುಂದಾದ ಉತ್ತರಾಖಂಡ ಸರಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...