Homeಮುಖಪುಟಚುನಾವಣಾ ಬಾಂಡ್ ಕುರಿತು ತಪ್ಪು ಮಾಹಿತಿ ನೀಡಿದ ಎಸ್‌ಬಿಐ? ಬಾಂಡ್‌ ಖರೀದಿಸಿದ್ದ ಪತ್ರಕರ್ತೆಯಿಂದ ಗಂಭೀರ ಆರೋಪ

ಚುನಾವಣಾ ಬಾಂಡ್ ಕುರಿತು ತಪ್ಪು ಮಾಹಿತಿ ನೀಡಿದ ಎಸ್‌ಬಿಐ? ಬಾಂಡ್‌ ಖರೀದಿಸಿದ್ದ ಪತ್ರಕರ್ತೆಯಿಂದ ಗಂಭೀರ ಆರೋಪ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ತಪ್ಪು ಮಾಹಿತಿಯನ್ನು ನೀಡಿದೆ ಎಂದು ಪತ್ರಕರ್ತೆ ಪೂನಂ ಅಗರ್ವಾಲ್ ಆರೋಪಿಸಿದ್ದಾರೆ. 2018ರಲ್ಲಿ ನಾನು 1,000ರೂ. ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದ್ದೆ, ಆದರೆ 2020ರ ಖರೀದಿದಾರರ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದೆ ಎಂದು ಹೇಳಿದ್ದು, ಈ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಿಂದ ವಿವರಣೆಯನ್ನು ಕೇಳಿದ್ದಾರೆ.

ಪತ್ರಕರ್ತೆ ಪೂನಂ ಅಗರ್ವಾಲ್ ಅವರು ಈ ಕುರಿತು ಪೋಸ್ಟ್‌ ಮಾಡಿದ್ದು, 2018ರಿಂದ ಮಾರ್ಚ್ 2019ರವರೆಗಿನ ಪಟ್ಟಿಯನ್ನು ಪ್ರಕಟಿಸದ ಕಾರಣ ನಾನು ಎರಡನೇ ಸುತ್ತಿನ ಮಾಹಿತಿ ಪ್ರಕಟಣೆಗಾಗಿ ಕಾಯುತ್ತಿದ್ದೆ. ನಾನು ಏಪ್ರಿಲ್ 2018ರಲ್ಲಿ ತಲಾ 1,000 ರೂಪಾಯಿಗಳ 2 ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ. ಆದರೆ ಡೇಟಾವು ನನ್ನ ಹೆಸರನ್ನು 20 ಅಕ್ಟೋಬರ್ 2020ರಲ್ಲಿ ಖರೀದಿ ಮಾಡಿರುವುದಾಗಿ ತೋರಿಸುತ್ತಿದೆ. ಇದು ತಪ್ಪಾಗಿದೆ ಅಥವಾ ಪೂನಂ ಅಗರ್ವಾಲ್ ಹೆಸರಿರುವ ಬೇರೆಯಾರದೂ ಬಾಂಡ್ ಖರೀದಿಸಿದ್ದಾರೆಯೇ? ಇದು ಕಾಕತಾಳಿಯವಾಗಿದೆ ಎಂದು ಹೇಳಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡಿನ ಸಚಿವ  ಡಾ ಪಿ ತ್ಯಾಗ ರಾಜನ್, ಅನುಪಮ್‌ ಅಗರ್ವಾಲ್‌ ಅವರ ಪೋಸ್ಟ್‌ನ್ನು ಹಂಚಿಕೊಂಡಿದ್ದು, ಇದು ತೀವ್ರ ಕಳವಳವನ್ನು ಉಂಟುಮಾಡುತ್ತದೆ, ಎಸ್‌ಬಿಐ ಸಲ್ಲಿಸಿದ ಡೇಟಾದ ಸತ್ಯಾಸತ್ಯತೆಯ ಬಗ್ಗೆ ಮಾತ್ರವಲ್ಲ, (ಸುಪ್ರೀಂಕೋರ್ಟ್‌ಗೆ ಸುಳ್ಳು ಅಫಿಡವಿಟ್ ಅಥವಾ ಡೇಟಾವನ್ನು ಸಲ್ಲಿಸುವುದು ಕಾನೂನು ಕ್ರಮ ಕೈಗೊಳ್ಳಬಹುದಾದ ಕ್ರಿಮಿನಲ್ ಅಪರಾಧ), ಅದು ಎಸ್‌ಬಿಐನ ವ್ಯವಸ್ಥೆ ಬಗ್ಗೆ ಗಮನಹರಿಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

 

ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು. ಮಾರ್ಚ್ 4ರಂದು SBI ಚುನಾವಣಾ ಬಾಂಡ್‌ ಕುರಿತ ಡೇಟಾವನ್ನು ನೀಡಲು ಮಾರ್ಚ್ 6ರ ಗಡುವಿನ ಬದಲಿಗೆ ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಈ ಕುರಿತ ಅರ್ಜಿ ವಿಚಾರಣೆ ವೇಳೆ ಮಾ.12ರೊಳಗೆ ಮಾಹಿತಿಯನ್ನು ನೀಡುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌ ಖಡಕ್‌ ನಿರ್ದೇಶನವನ್ನು ನೀಡಿತ್ತು.ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು. ನಿನ್ನೆ ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....