Homeಮುಖಪುಟಚುನಾವಣಾ ಬಾಂಡ್ ಕುರಿತು ತಪ್ಪು ಮಾಹಿತಿ ನೀಡಿದ ಎಸ್‌ಬಿಐ? ಬಾಂಡ್‌ ಖರೀದಿಸಿದ್ದ ಪತ್ರಕರ್ತೆಯಿಂದ ಗಂಭೀರ ಆರೋಪ

ಚುನಾವಣಾ ಬಾಂಡ್ ಕುರಿತು ತಪ್ಪು ಮಾಹಿತಿ ನೀಡಿದ ಎಸ್‌ಬಿಐ? ಬಾಂಡ್‌ ಖರೀದಿಸಿದ್ದ ಪತ್ರಕರ್ತೆಯಿಂದ ಗಂಭೀರ ಆರೋಪ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ತಪ್ಪು ಮಾಹಿತಿಯನ್ನು ನೀಡಿದೆ ಎಂದು ಪತ್ರಕರ್ತೆ ಪೂನಂ ಅಗರ್ವಾಲ್ ಆರೋಪಿಸಿದ್ದಾರೆ. 2018ರಲ್ಲಿ ನಾನು 1,000ರೂ. ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದ್ದೆ, ಆದರೆ 2020ರ ಖರೀದಿದಾರರ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದೆ ಎಂದು ಹೇಳಿದ್ದು, ಈ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಿಂದ ವಿವರಣೆಯನ್ನು ಕೇಳಿದ್ದಾರೆ.

ಪತ್ರಕರ್ತೆ ಪೂನಂ ಅಗರ್ವಾಲ್ ಅವರು ಈ ಕುರಿತು ಪೋಸ್ಟ್‌ ಮಾಡಿದ್ದು, 2018ರಿಂದ ಮಾರ್ಚ್ 2019ರವರೆಗಿನ ಪಟ್ಟಿಯನ್ನು ಪ್ರಕಟಿಸದ ಕಾರಣ ನಾನು ಎರಡನೇ ಸುತ್ತಿನ ಮಾಹಿತಿ ಪ್ರಕಟಣೆಗಾಗಿ ಕಾಯುತ್ತಿದ್ದೆ. ನಾನು ಏಪ್ರಿಲ್ 2018ರಲ್ಲಿ ತಲಾ 1,000 ರೂಪಾಯಿಗಳ 2 ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ. ಆದರೆ ಡೇಟಾವು ನನ್ನ ಹೆಸರನ್ನು 20 ಅಕ್ಟೋಬರ್ 2020ರಲ್ಲಿ ಖರೀದಿ ಮಾಡಿರುವುದಾಗಿ ತೋರಿಸುತ್ತಿದೆ. ಇದು ತಪ್ಪಾಗಿದೆ ಅಥವಾ ಪೂನಂ ಅಗರ್ವಾಲ್ ಹೆಸರಿರುವ ಬೇರೆಯಾರದೂ ಬಾಂಡ್ ಖರೀದಿಸಿದ್ದಾರೆಯೇ? ಇದು ಕಾಕತಾಳಿಯವಾಗಿದೆ ಎಂದು ಹೇಳಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡಿನ ಸಚಿವ  ಡಾ ಪಿ ತ್ಯಾಗ ರಾಜನ್, ಅನುಪಮ್‌ ಅಗರ್ವಾಲ್‌ ಅವರ ಪೋಸ್ಟ್‌ನ್ನು ಹಂಚಿಕೊಂಡಿದ್ದು, ಇದು ತೀವ್ರ ಕಳವಳವನ್ನು ಉಂಟುಮಾಡುತ್ತದೆ, ಎಸ್‌ಬಿಐ ಸಲ್ಲಿಸಿದ ಡೇಟಾದ ಸತ್ಯಾಸತ್ಯತೆಯ ಬಗ್ಗೆ ಮಾತ್ರವಲ್ಲ, (ಸುಪ್ರೀಂಕೋರ್ಟ್‌ಗೆ ಸುಳ್ಳು ಅಫಿಡವಿಟ್ ಅಥವಾ ಡೇಟಾವನ್ನು ಸಲ್ಲಿಸುವುದು ಕಾನೂನು ಕ್ರಮ ಕೈಗೊಳ್ಳಬಹುದಾದ ಕ್ರಿಮಿನಲ್ ಅಪರಾಧ), ಅದು ಎಸ್‌ಬಿಐನ ವ್ಯವಸ್ಥೆ ಬಗ್ಗೆ ಗಮನಹರಿಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

 

ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು. ಮಾರ್ಚ್ 4ರಂದು SBI ಚುನಾವಣಾ ಬಾಂಡ್‌ ಕುರಿತ ಡೇಟಾವನ್ನು ನೀಡಲು ಮಾರ್ಚ್ 6ರ ಗಡುವಿನ ಬದಲಿಗೆ ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಈ ಕುರಿತ ಅರ್ಜಿ ವಿಚಾರಣೆ ವೇಳೆ ಮಾ.12ರೊಳಗೆ ಮಾಹಿತಿಯನ್ನು ನೀಡುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌ ಖಡಕ್‌ ನಿರ್ದೇಶನವನ್ನು ನೀಡಿತ್ತು.ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು. ನಿನ್ನೆ ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...