Homeಮುಖಪುಟಚುನಾವಣಾ ಬಾಂಡ್ ಕುರಿತು ತಪ್ಪು ಮಾಹಿತಿ ನೀಡಿದ ಎಸ್‌ಬಿಐ? ಬಾಂಡ್‌ ಖರೀದಿಸಿದ್ದ ಪತ್ರಕರ್ತೆಯಿಂದ ಗಂಭೀರ ಆರೋಪ

ಚುನಾವಣಾ ಬಾಂಡ್ ಕುರಿತು ತಪ್ಪು ಮಾಹಿತಿ ನೀಡಿದ ಎಸ್‌ಬಿಐ? ಬಾಂಡ್‌ ಖರೀದಿಸಿದ್ದ ಪತ್ರಕರ್ತೆಯಿಂದ ಗಂಭೀರ ಆರೋಪ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ತಪ್ಪು ಮಾಹಿತಿಯನ್ನು ನೀಡಿದೆ ಎಂದು ಪತ್ರಕರ್ತೆ ಪೂನಂ ಅಗರ್ವಾಲ್ ಆರೋಪಿಸಿದ್ದಾರೆ. 2018ರಲ್ಲಿ ನಾನು 1,000ರೂ. ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದ್ದೆ, ಆದರೆ 2020ರ ಖರೀದಿದಾರರ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದೆ ಎಂದು ಹೇಳಿದ್ದು, ಈ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಿಂದ ವಿವರಣೆಯನ್ನು ಕೇಳಿದ್ದಾರೆ.

ಪತ್ರಕರ್ತೆ ಪೂನಂ ಅಗರ್ವಾಲ್ ಅವರು ಈ ಕುರಿತು ಪೋಸ್ಟ್‌ ಮಾಡಿದ್ದು, 2018ರಿಂದ ಮಾರ್ಚ್ 2019ರವರೆಗಿನ ಪಟ್ಟಿಯನ್ನು ಪ್ರಕಟಿಸದ ಕಾರಣ ನಾನು ಎರಡನೇ ಸುತ್ತಿನ ಮಾಹಿತಿ ಪ್ರಕಟಣೆಗಾಗಿ ಕಾಯುತ್ತಿದ್ದೆ. ನಾನು ಏಪ್ರಿಲ್ 2018ರಲ್ಲಿ ತಲಾ 1,000 ರೂಪಾಯಿಗಳ 2 ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ. ಆದರೆ ಡೇಟಾವು ನನ್ನ ಹೆಸರನ್ನು 20 ಅಕ್ಟೋಬರ್ 2020ರಲ್ಲಿ ಖರೀದಿ ಮಾಡಿರುವುದಾಗಿ ತೋರಿಸುತ್ತಿದೆ. ಇದು ತಪ್ಪಾಗಿದೆ ಅಥವಾ ಪೂನಂ ಅಗರ್ವಾಲ್ ಹೆಸರಿರುವ ಬೇರೆಯಾರದೂ ಬಾಂಡ್ ಖರೀದಿಸಿದ್ದಾರೆಯೇ? ಇದು ಕಾಕತಾಳಿಯವಾಗಿದೆ ಎಂದು ಹೇಳಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡಿನ ಸಚಿವ  ಡಾ ಪಿ ತ್ಯಾಗ ರಾಜನ್, ಅನುಪಮ್‌ ಅಗರ್ವಾಲ್‌ ಅವರ ಪೋಸ್ಟ್‌ನ್ನು ಹಂಚಿಕೊಂಡಿದ್ದು, ಇದು ತೀವ್ರ ಕಳವಳವನ್ನು ಉಂಟುಮಾಡುತ್ತದೆ, ಎಸ್‌ಬಿಐ ಸಲ್ಲಿಸಿದ ಡೇಟಾದ ಸತ್ಯಾಸತ್ಯತೆಯ ಬಗ್ಗೆ ಮಾತ್ರವಲ್ಲ, (ಸುಪ್ರೀಂಕೋರ್ಟ್‌ಗೆ ಸುಳ್ಳು ಅಫಿಡವಿಟ್ ಅಥವಾ ಡೇಟಾವನ್ನು ಸಲ್ಲಿಸುವುದು ಕಾನೂನು ಕ್ರಮ ಕೈಗೊಳ್ಳಬಹುದಾದ ಕ್ರಿಮಿನಲ್ ಅಪರಾಧ), ಅದು ಎಸ್‌ಬಿಐನ ವ್ಯವಸ್ಥೆ ಬಗ್ಗೆ ಗಮನಹರಿಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

 

ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು. ಮಾರ್ಚ್ 4ರಂದು SBI ಚುನಾವಣಾ ಬಾಂಡ್‌ ಕುರಿತ ಡೇಟಾವನ್ನು ನೀಡಲು ಮಾರ್ಚ್ 6ರ ಗಡುವಿನ ಬದಲಿಗೆ ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಈ ಕುರಿತ ಅರ್ಜಿ ವಿಚಾರಣೆ ವೇಳೆ ಮಾ.12ರೊಳಗೆ ಮಾಹಿತಿಯನ್ನು ನೀಡುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌ ಖಡಕ್‌ ನಿರ್ದೇಶನವನ್ನು ನೀಡಿತ್ತು.ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು. ನಿನ್ನೆ ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...