Homeಚಳವಳಿಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಆದಿವಾಸಿಗಳ ಪರವಾಗಿ ಬರೆಯುತ್ತಿದ್ದ ಅವರನ್ನು ಯಾಕೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ಇನ್ನೂ ಕಾರಣ ತಿಳಿಸಿಲ್ಲ

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಪೊಲೀಸರು ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಪೊಲೀಸ್ ಪಡೆಗಳು ಮುಂಜಾನೆ ರೂಪೇಶ್ ಕುಮಾರ್ ಸಿಂಗ್ ಅವರ ಮನೆಗೆ ತೆರಳಿ ಮಧ್ಯಾಹ್ನ 1 ಗಂಟೆಯವರೆಗೆ ಮನೆಯನ್ನು ಶೋಧಿಸಿದ್ದರು.

ಪೊಲೀಸರೊಂದಿಗೆ ಬಂಧನ ವಾರಂಟ್ ಇದ್ದರೂ ಮಧ್ಯಾಹ್ನ 1 ಗಂಟೆಯವರೆಗೆ ಅದನ್ನು ತೋರಿಸಲಿಲ್ಲ ಎಂದು ‘ಗೌರಿಲಂಕೇಶ್‌‌ನ್ಯೂಸ್‌’ ವರದಿ ಮಾಡಿದೆ. ಬೆಳಿಗ್ಗೆ 5.30 ಕ್ಕೆ ರೂಪೇಶ್ ಕುಟುಂಬ ಇನ್ನೂ ನಿದ್ದೆಯಲ್ಲಿದ್ದಾಗ ಪೊಲೀಸರು ಮನೆಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಮನೆಯನ್ನು ಮಧ್ಯಾಹ್ನ 1 ಗಂಟೆಯವರೆಗೂ ಪೊಲೀಸರು ಶೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಚ್ ವಾರೆಂಟ್ ಪ್ರಕಾರ, ಸೆರೈಕೆಲಾ-ಖರ್ಸಾನ್ವಾದ ಕಂದ್ರಾ ಪೊಲೀಸ್ ಠಾಣೆಯಿಂದ ಎಂಟು ತಿಂಗಳ ಹಿಂದಿನ ಪ್ರಕರಣ ವಿಚಾರವಾಗಿ ಹುಡುಕಾಟ ನಡೆಸಬೇಕಿತ್ತು. ಮಧ್ಯಾಹ್ನ 1 ಗಂಟೆಗೆ ವಸ್ತುಗಳನ್ನು ವಶಪಡಿಸಿಕೊಳ್ಳುವವರೆಗೆ ಪೊಲೀಸರು ಬಂಧನ ವಾರಂಟ್ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತ ಜಾರ್ಖಂಡ್ ಪೊಲೀಸರಿಂದ ಅರೆಸ್ಟ್‌‌‌! | ನಾನುಗೌರಿ.ಕಾಂ
ಬಂಧನ

ವಶಪಡಿಸಿಕೊಳ್ಳುವ ಎಲ್ಲಾ ವಸ್ತುಗಳನ್ನು ಸಿದ್ಧಪಡಿಸಿ, ರೂಪೇಶ್ ಕುಮಾರ್ ಸಿಂಗ್ ಅವರನ್ನು ಬಂಧಿಸಿ ಬಂಧನ ವಾರಂಟ್ ತೋರಿಸಿ ನಂತರ ಕರೆದೊಯ್ಯಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಬೆಡ್‌ಶೀಟ್‌ಗಳು, ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳು ಮತ್ತು ಸೀಲ್ ಮಾಡಿದ ವಾಹನದ ದಾಖಲೆಗಳಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ರೂಪೇಶ್ ಕುಮಾರ್ ಸಿಂಗ್ ಈಗಾಗಲೇ ಸರ್ಕಾರಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಕೇಂದ್ರ ಸರ್ಕಾರ ಅವರನ್ನು ಪೆಗಾಸಸ್ ಪಟ್ಟಿಯಲ್ಲಿ ಇರಿಸಿ, ಅವರ ಫೋನ್ ಅನ್ನು ಅಕ್ರಮವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಆದರೆ ರಾಜ್ಯ ಪೊಲೀಸರು ಅವರನ್ನು ಬಂಧಿಸಿರುವ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಮನೆಯಲ್ಲಿ ಹುಡುಕಾಟ ನಡೆಸುತ್ತಿರುವ ಪೊಲೀಸರು

ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ರೂಪೇಶ್ ಸದಾ ದನಿಯೆತ್ತಿದ್ದಾರೆ. ಅವರು ‘ಭೂಮಿ, ನೀರು ಮತ್ತು ಅರಣ್ಯ ಹಕ್ಕುಗಳು(ಜಲ್, ಜಂಗಲ್ ಮತ್ತು ಜಮೀನ್) ಮತ್ತು ಆದಿವಾಸಿಗಳ ವಿರುದ್ಧದ ಸರ್ಕಾರದ ದೌರ್ಜನ್ಯಗಳ ಬಗ್ಗೆ ನಿರಂತವಾಗಿ ಬರೆಯುತ್ತಿದ್ದರು. ಅವರ ವರದಿಗಳು ವಿವರವಾದ ಪುರಾವೆಗಳನ್ನು ಆಧರಿಸಿ ವರದಿಯಾಗುತ್ತಿದ್ದವು. ಆದಿವಾಸಿ ಹಕ್ಕುಗಳ ಸಂಬಂಧಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅನೇಕ ಸಂಸ್ಥೆಗಳಿಗೆ ಈ ವರದಿಗಳು ಸಹಾಯ ಮಾಡಿದ್ದವು.

ಅರೆಸ್ಟ್‌ ವಾರೆಂಟ್

ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಗಿರ್ಡಿಹ್ ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಾರ್ಖಾನೆಗಳ ಹೊಗೆ ಮತ್ತು ಬೂದಿಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಅವರು ಇತ್ತೀಚೆಗೆ ವರದಿ ಮಾಡಿದ್ದರು. ಈ ವರದಿಯಲ್ಲಿ ಆ ಪ್ರದೇಶದಲ್ಲಿನ ಕಾರ್ಖಾನೆಗಳು ಅಲ್ಲಿನ ಜನರ ಅನಾರೋಗ್ಯಕ್ಕೆ ವಿಪತ್ತುಗಳಿಗೆ ಹೇಗೆ ಕಾರಣವಾಗಿವೆ ಎಂಬುದನ್ನು ನಿರೂಪಿಸಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರೂಪೇಶ್ ಬಂಧನವು ಸುಪ್ರೀಂ ಕೋರ್ಟ್ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿ, ಪೊಲೀಸರು ವಿಚಾರಣೆ ನಡೆಸಿ ಬಂಧಿಸುವ ಮೊದಲು ಸಂಬಂಧಪಟ್ಟ ವ್ಯಕ್ತಿಗೆ ತಿಳಿಸಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಈ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...