Homeಚಳವಳಿಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಆದಿವಾಸಿಗಳ ಪರವಾಗಿ ಬರೆಯುತ್ತಿದ್ದ ಅವರನ್ನು ಯಾಕೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ಇನ್ನೂ ಕಾರಣ ತಿಳಿಸಿಲ್ಲ

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಪೊಲೀಸರು ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಪೊಲೀಸ್ ಪಡೆಗಳು ಮುಂಜಾನೆ ರೂಪೇಶ್ ಕುಮಾರ್ ಸಿಂಗ್ ಅವರ ಮನೆಗೆ ತೆರಳಿ ಮಧ್ಯಾಹ್ನ 1 ಗಂಟೆಯವರೆಗೆ ಮನೆಯನ್ನು ಶೋಧಿಸಿದ್ದರು.

ಪೊಲೀಸರೊಂದಿಗೆ ಬಂಧನ ವಾರಂಟ್ ಇದ್ದರೂ ಮಧ್ಯಾಹ್ನ 1 ಗಂಟೆಯವರೆಗೆ ಅದನ್ನು ತೋರಿಸಲಿಲ್ಲ ಎಂದು ‘ಗೌರಿಲಂಕೇಶ್‌‌ನ್ಯೂಸ್‌’ ವರದಿ ಮಾಡಿದೆ. ಬೆಳಿಗ್ಗೆ 5.30 ಕ್ಕೆ ರೂಪೇಶ್ ಕುಟುಂಬ ಇನ್ನೂ ನಿದ್ದೆಯಲ್ಲಿದ್ದಾಗ ಪೊಲೀಸರು ಮನೆಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಮನೆಯನ್ನು ಮಧ್ಯಾಹ್ನ 1 ಗಂಟೆಯವರೆಗೂ ಪೊಲೀಸರು ಶೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಚ್ ವಾರೆಂಟ್ ಪ್ರಕಾರ, ಸೆರೈಕೆಲಾ-ಖರ್ಸಾನ್ವಾದ ಕಂದ್ರಾ ಪೊಲೀಸ್ ಠಾಣೆಯಿಂದ ಎಂಟು ತಿಂಗಳ ಹಿಂದಿನ ಪ್ರಕರಣ ವಿಚಾರವಾಗಿ ಹುಡುಕಾಟ ನಡೆಸಬೇಕಿತ್ತು. ಮಧ್ಯಾಹ್ನ 1 ಗಂಟೆಗೆ ವಸ್ತುಗಳನ್ನು ವಶಪಡಿಸಿಕೊಳ್ಳುವವರೆಗೆ ಪೊಲೀಸರು ಬಂಧನ ವಾರಂಟ್ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತ ಜಾರ್ಖಂಡ್ ಪೊಲೀಸರಿಂದ ಅರೆಸ್ಟ್‌‌‌! | ನಾನುಗೌರಿ.ಕಾಂ
ಬಂಧನ

ವಶಪಡಿಸಿಕೊಳ್ಳುವ ಎಲ್ಲಾ ವಸ್ತುಗಳನ್ನು ಸಿದ್ಧಪಡಿಸಿ, ರೂಪೇಶ್ ಕುಮಾರ್ ಸಿಂಗ್ ಅವರನ್ನು ಬಂಧಿಸಿ ಬಂಧನ ವಾರಂಟ್ ತೋರಿಸಿ ನಂತರ ಕರೆದೊಯ್ಯಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಬೆಡ್‌ಶೀಟ್‌ಗಳು, ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳು ಮತ್ತು ಸೀಲ್ ಮಾಡಿದ ವಾಹನದ ದಾಖಲೆಗಳಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ರೂಪೇಶ್ ಕುಮಾರ್ ಸಿಂಗ್ ಈಗಾಗಲೇ ಸರ್ಕಾರಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಕೇಂದ್ರ ಸರ್ಕಾರ ಅವರನ್ನು ಪೆಗಾಸಸ್ ಪಟ್ಟಿಯಲ್ಲಿ ಇರಿಸಿ, ಅವರ ಫೋನ್ ಅನ್ನು ಅಕ್ರಮವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಆದರೆ ರಾಜ್ಯ ಪೊಲೀಸರು ಅವರನ್ನು ಬಂಧಿಸಿರುವ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಮನೆಯಲ್ಲಿ ಹುಡುಕಾಟ ನಡೆಸುತ್ತಿರುವ ಪೊಲೀಸರು

ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ರೂಪೇಶ್ ಸದಾ ದನಿಯೆತ್ತಿದ್ದಾರೆ. ಅವರು ‘ಭೂಮಿ, ನೀರು ಮತ್ತು ಅರಣ್ಯ ಹಕ್ಕುಗಳು(ಜಲ್, ಜಂಗಲ್ ಮತ್ತು ಜಮೀನ್) ಮತ್ತು ಆದಿವಾಸಿಗಳ ವಿರುದ್ಧದ ಸರ್ಕಾರದ ದೌರ್ಜನ್ಯಗಳ ಬಗ್ಗೆ ನಿರಂತವಾಗಿ ಬರೆಯುತ್ತಿದ್ದರು. ಅವರ ವರದಿಗಳು ವಿವರವಾದ ಪುರಾವೆಗಳನ್ನು ಆಧರಿಸಿ ವರದಿಯಾಗುತ್ತಿದ್ದವು. ಆದಿವಾಸಿ ಹಕ್ಕುಗಳ ಸಂಬಂಧಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅನೇಕ ಸಂಸ್ಥೆಗಳಿಗೆ ಈ ವರದಿಗಳು ಸಹಾಯ ಮಾಡಿದ್ದವು.

ಅರೆಸ್ಟ್‌ ವಾರೆಂಟ್

ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಗಿರ್ಡಿಹ್ ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಾರ್ಖಾನೆಗಳ ಹೊಗೆ ಮತ್ತು ಬೂದಿಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಅವರು ಇತ್ತೀಚೆಗೆ ವರದಿ ಮಾಡಿದ್ದರು. ಈ ವರದಿಯಲ್ಲಿ ಆ ಪ್ರದೇಶದಲ್ಲಿನ ಕಾರ್ಖಾನೆಗಳು ಅಲ್ಲಿನ ಜನರ ಅನಾರೋಗ್ಯಕ್ಕೆ ವಿಪತ್ತುಗಳಿಗೆ ಹೇಗೆ ಕಾರಣವಾಗಿವೆ ಎಂಬುದನ್ನು ನಿರೂಪಿಸಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರೂಪೇಶ್ ಬಂಧನವು ಸುಪ್ರೀಂ ಕೋರ್ಟ್ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿ, ಪೊಲೀಸರು ವಿಚಾರಣೆ ನಡೆಸಿ ಬಂಧಿಸುವ ಮೊದಲು ಸಂಬಂಧಪಟ್ಟ ವ್ಯಕ್ತಿಗೆ ತಿಳಿಸಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಈ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...