Homeಚಳವಳಿಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಆದಿವಾಸಿಗಳ ಪರವಾಗಿ ಬರೆಯುತ್ತಿದ್ದ ಅವರನ್ನು ಯಾಕೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ಇನ್ನೂ ಕಾರಣ ತಿಳಿಸಿಲ್ಲ

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಪೊಲೀಸರು ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಪೊಲೀಸ್ ಪಡೆಗಳು ಮುಂಜಾನೆ ರೂಪೇಶ್ ಕುಮಾರ್ ಸಿಂಗ್ ಅವರ ಮನೆಗೆ ತೆರಳಿ ಮಧ್ಯಾಹ್ನ 1 ಗಂಟೆಯವರೆಗೆ ಮನೆಯನ್ನು ಶೋಧಿಸಿದ್ದರು.

ಪೊಲೀಸರೊಂದಿಗೆ ಬಂಧನ ವಾರಂಟ್ ಇದ್ದರೂ ಮಧ್ಯಾಹ್ನ 1 ಗಂಟೆಯವರೆಗೆ ಅದನ್ನು ತೋರಿಸಲಿಲ್ಲ ಎಂದು ‘ಗೌರಿಲಂಕೇಶ್‌‌ನ್ಯೂಸ್‌’ ವರದಿ ಮಾಡಿದೆ. ಬೆಳಿಗ್ಗೆ 5.30 ಕ್ಕೆ ರೂಪೇಶ್ ಕುಟುಂಬ ಇನ್ನೂ ನಿದ್ದೆಯಲ್ಲಿದ್ದಾಗ ಪೊಲೀಸರು ಮನೆಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಮನೆಯನ್ನು ಮಧ್ಯಾಹ್ನ 1 ಗಂಟೆಯವರೆಗೂ ಪೊಲೀಸರು ಶೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಚ್ ವಾರೆಂಟ್ ಪ್ರಕಾರ, ಸೆರೈಕೆಲಾ-ಖರ್ಸಾನ್ವಾದ ಕಂದ್ರಾ ಪೊಲೀಸ್ ಠಾಣೆಯಿಂದ ಎಂಟು ತಿಂಗಳ ಹಿಂದಿನ ಪ್ರಕರಣ ವಿಚಾರವಾಗಿ ಹುಡುಕಾಟ ನಡೆಸಬೇಕಿತ್ತು. ಮಧ್ಯಾಹ್ನ 1 ಗಂಟೆಗೆ ವಸ್ತುಗಳನ್ನು ವಶಪಡಿಸಿಕೊಳ್ಳುವವರೆಗೆ ಪೊಲೀಸರು ಬಂಧನ ವಾರಂಟ್ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತ ಜಾರ್ಖಂಡ್ ಪೊಲೀಸರಿಂದ ಅರೆಸ್ಟ್‌‌‌! | ನಾನುಗೌರಿ.ಕಾಂ
ಬಂಧನ

ವಶಪಡಿಸಿಕೊಳ್ಳುವ ಎಲ್ಲಾ ವಸ್ತುಗಳನ್ನು ಸಿದ್ಧಪಡಿಸಿ, ರೂಪೇಶ್ ಕುಮಾರ್ ಸಿಂಗ್ ಅವರನ್ನು ಬಂಧಿಸಿ ಬಂಧನ ವಾರಂಟ್ ತೋರಿಸಿ ನಂತರ ಕರೆದೊಯ್ಯಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಬೆಡ್‌ಶೀಟ್‌ಗಳು, ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳು ಮತ್ತು ಸೀಲ್ ಮಾಡಿದ ವಾಹನದ ದಾಖಲೆಗಳಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ರೂಪೇಶ್ ಕುಮಾರ್ ಸಿಂಗ್ ಈಗಾಗಲೇ ಸರ್ಕಾರಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಕೇಂದ್ರ ಸರ್ಕಾರ ಅವರನ್ನು ಪೆಗಾಸಸ್ ಪಟ್ಟಿಯಲ್ಲಿ ಇರಿಸಿ, ಅವರ ಫೋನ್ ಅನ್ನು ಅಕ್ರಮವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಆದರೆ ರಾಜ್ಯ ಪೊಲೀಸರು ಅವರನ್ನು ಬಂಧಿಸಿರುವ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಮನೆಯಲ್ಲಿ ಹುಡುಕಾಟ ನಡೆಸುತ್ತಿರುವ ಪೊಲೀಸರು

ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ರೂಪೇಶ್ ಸದಾ ದನಿಯೆತ್ತಿದ್ದಾರೆ. ಅವರು ‘ಭೂಮಿ, ನೀರು ಮತ್ತು ಅರಣ್ಯ ಹಕ್ಕುಗಳು(ಜಲ್, ಜಂಗಲ್ ಮತ್ತು ಜಮೀನ್) ಮತ್ತು ಆದಿವಾಸಿಗಳ ವಿರುದ್ಧದ ಸರ್ಕಾರದ ದೌರ್ಜನ್ಯಗಳ ಬಗ್ಗೆ ನಿರಂತವಾಗಿ ಬರೆಯುತ್ತಿದ್ದರು. ಅವರ ವರದಿಗಳು ವಿವರವಾದ ಪುರಾವೆಗಳನ್ನು ಆಧರಿಸಿ ವರದಿಯಾಗುತ್ತಿದ್ದವು. ಆದಿವಾಸಿ ಹಕ್ಕುಗಳ ಸಂಬಂಧಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅನೇಕ ಸಂಸ್ಥೆಗಳಿಗೆ ಈ ವರದಿಗಳು ಸಹಾಯ ಮಾಡಿದ್ದವು.

ಅರೆಸ್ಟ್‌ ವಾರೆಂಟ್

ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಗಿರ್ಡಿಹ್ ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಾರ್ಖಾನೆಗಳ ಹೊಗೆ ಮತ್ತು ಬೂದಿಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಅವರು ಇತ್ತೀಚೆಗೆ ವರದಿ ಮಾಡಿದ್ದರು. ಈ ವರದಿಯಲ್ಲಿ ಆ ಪ್ರದೇಶದಲ್ಲಿನ ಕಾರ್ಖಾನೆಗಳು ಅಲ್ಲಿನ ಜನರ ಅನಾರೋಗ್ಯಕ್ಕೆ ವಿಪತ್ತುಗಳಿಗೆ ಹೇಗೆ ಕಾರಣವಾಗಿವೆ ಎಂಬುದನ್ನು ನಿರೂಪಿಸಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರೂಪೇಶ್ ಬಂಧನವು ಸುಪ್ರೀಂ ಕೋರ್ಟ್ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿ, ಪೊಲೀಸರು ವಿಚಾರಣೆ ನಡೆಸಿ ಬಂಧಿಸುವ ಮೊದಲು ಸಂಬಂಧಪಟ್ಟ ವ್ಯಕ್ತಿಗೆ ತಿಳಿಸಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಈ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇಂದೆತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...