Homeಚಳವಳಿಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಆದಿವಾಸಿಗಳ ಪರವಾಗಿ ಬರೆಯುತ್ತಿದ್ದ ಅವರನ್ನು ಯಾಕೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ಇನ್ನೂ ಕಾರಣ ತಿಳಿಸಿಲ್ಲ

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಪೊಲೀಸರು ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಪೊಲೀಸ್ ಪಡೆಗಳು ಮುಂಜಾನೆ ರೂಪೇಶ್ ಕುಮಾರ್ ಸಿಂಗ್ ಅವರ ಮನೆಗೆ ತೆರಳಿ ಮಧ್ಯಾಹ್ನ 1 ಗಂಟೆಯವರೆಗೆ ಮನೆಯನ್ನು ಶೋಧಿಸಿದ್ದರು.

ಪೊಲೀಸರೊಂದಿಗೆ ಬಂಧನ ವಾರಂಟ್ ಇದ್ದರೂ ಮಧ್ಯಾಹ್ನ 1 ಗಂಟೆಯವರೆಗೆ ಅದನ್ನು ತೋರಿಸಲಿಲ್ಲ ಎಂದು ‘ಗೌರಿಲಂಕೇಶ್‌‌ನ್ಯೂಸ್‌’ ವರದಿ ಮಾಡಿದೆ. ಬೆಳಿಗ್ಗೆ 5.30 ಕ್ಕೆ ರೂಪೇಶ್ ಕುಟುಂಬ ಇನ್ನೂ ನಿದ್ದೆಯಲ್ಲಿದ್ದಾಗ ಪೊಲೀಸರು ಮನೆಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಮನೆಯನ್ನು ಮಧ್ಯಾಹ್ನ 1 ಗಂಟೆಯವರೆಗೂ ಪೊಲೀಸರು ಶೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಚ್ ವಾರೆಂಟ್ ಪ್ರಕಾರ, ಸೆರೈಕೆಲಾ-ಖರ್ಸಾನ್ವಾದ ಕಂದ್ರಾ ಪೊಲೀಸ್ ಠಾಣೆಯಿಂದ ಎಂಟು ತಿಂಗಳ ಹಿಂದಿನ ಪ್ರಕರಣ ವಿಚಾರವಾಗಿ ಹುಡುಕಾಟ ನಡೆಸಬೇಕಿತ್ತು. ಮಧ್ಯಾಹ್ನ 1 ಗಂಟೆಗೆ ವಸ್ತುಗಳನ್ನು ವಶಪಡಿಸಿಕೊಳ್ಳುವವರೆಗೆ ಪೊಲೀಸರು ಬಂಧನ ವಾರಂಟ್ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತ ಜಾರ್ಖಂಡ್ ಪೊಲೀಸರಿಂದ ಅರೆಸ್ಟ್‌‌‌! | ನಾನುಗೌರಿ.ಕಾಂ
ಬಂಧನ

ವಶಪಡಿಸಿಕೊಳ್ಳುವ ಎಲ್ಲಾ ವಸ್ತುಗಳನ್ನು ಸಿದ್ಧಪಡಿಸಿ, ರೂಪೇಶ್ ಕುಮಾರ್ ಸಿಂಗ್ ಅವರನ್ನು ಬಂಧಿಸಿ ಬಂಧನ ವಾರಂಟ್ ತೋರಿಸಿ ನಂತರ ಕರೆದೊಯ್ಯಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಬೆಡ್‌ಶೀಟ್‌ಗಳು, ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳು ಮತ್ತು ಸೀಲ್ ಮಾಡಿದ ವಾಹನದ ದಾಖಲೆಗಳಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ರೂಪೇಶ್ ಕುಮಾರ್ ಸಿಂಗ್ ಈಗಾಗಲೇ ಸರ್ಕಾರಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಕೇಂದ್ರ ಸರ್ಕಾರ ಅವರನ್ನು ಪೆಗಾಸಸ್ ಪಟ್ಟಿಯಲ್ಲಿ ಇರಿಸಿ, ಅವರ ಫೋನ್ ಅನ್ನು ಅಕ್ರಮವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಆದರೆ ರಾಜ್ಯ ಪೊಲೀಸರು ಅವರನ್ನು ಬಂಧಿಸಿರುವ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಮನೆಯಲ್ಲಿ ಹುಡುಕಾಟ ನಡೆಸುತ್ತಿರುವ ಪೊಲೀಸರು

ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ರೂಪೇಶ್ ಸದಾ ದನಿಯೆತ್ತಿದ್ದಾರೆ. ಅವರು ‘ಭೂಮಿ, ನೀರು ಮತ್ತು ಅರಣ್ಯ ಹಕ್ಕುಗಳು(ಜಲ್, ಜಂಗಲ್ ಮತ್ತು ಜಮೀನ್) ಮತ್ತು ಆದಿವಾಸಿಗಳ ವಿರುದ್ಧದ ಸರ್ಕಾರದ ದೌರ್ಜನ್ಯಗಳ ಬಗ್ಗೆ ನಿರಂತವಾಗಿ ಬರೆಯುತ್ತಿದ್ದರು. ಅವರ ವರದಿಗಳು ವಿವರವಾದ ಪುರಾವೆಗಳನ್ನು ಆಧರಿಸಿ ವರದಿಯಾಗುತ್ತಿದ್ದವು. ಆದಿವಾಸಿ ಹಕ್ಕುಗಳ ಸಂಬಂಧಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅನೇಕ ಸಂಸ್ಥೆಗಳಿಗೆ ಈ ವರದಿಗಳು ಸಹಾಯ ಮಾಡಿದ್ದವು.

ಅರೆಸ್ಟ್‌ ವಾರೆಂಟ್

ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಗಿರ್ಡಿಹ್ ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಾರ್ಖಾನೆಗಳ ಹೊಗೆ ಮತ್ತು ಬೂದಿಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಅವರು ಇತ್ತೀಚೆಗೆ ವರದಿ ಮಾಡಿದ್ದರು. ಈ ವರದಿಯಲ್ಲಿ ಆ ಪ್ರದೇಶದಲ್ಲಿನ ಕಾರ್ಖಾನೆಗಳು ಅಲ್ಲಿನ ಜನರ ಅನಾರೋಗ್ಯಕ್ಕೆ ವಿಪತ್ತುಗಳಿಗೆ ಹೇಗೆ ಕಾರಣವಾಗಿವೆ ಎಂಬುದನ್ನು ನಿರೂಪಿಸಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರೂಪೇಶ್ ಬಂಧನವು ಸುಪ್ರೀಂ ಕೋರ್ಟ್ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿ, ಪೊಲೀಸರು ವಿಚಾರಣೆ ನಡೆಸಿ ಬಂಧಿಸುವ ಮೊದಲು ಸಂಬಂಧಪಟ್ಟ ವ್ಯಕ್ತಿಗೆ ತಿಳಿಸಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಈ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...