Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...