Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...