Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...