Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...