Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...