Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...