Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...