Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...