Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...