Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...