Homeಕರ್ನಾಟಕಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

ಪತ್ರಕರ್ತ ಜುಬೇರ್‌ಗೆ ಸಂಘಪರಿವಾರದವರಿಂದ ಸರಣಿ ಕೊಲೆ ಬೆದರಿಕೆ!

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಸಂಘ ಪರಿವಾರದ ಬೆಂಬಲಿಗರು ಆನ್‌ಲೈನ್‌ನಲ್ಲಿ ಸರಣಿ ಕೊಲೆ ಬೆದರಿಕೆಯೊಡ್ಡಿದ್ದಾರೆ. ಕೆಲವರು ಪತ್ರಕರ್ತನ ಮೇಲೆ ಹಿಂಸಾಚಾರ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಜುಬೇರ್ ಅವರ ವಿರುದ್ಧ ʼಅಖ್ಲಾಕ್‌ʼ ರೀತಿಯ ದಾಳಿ ಸೇರಿದಂತೆ ವಿವಿಧ ಬೆದರಿಕೆಗಳನ್ನು ಒಡ್ಡಲಾಗಿದೆ. ಝುಬೈರ್‌ ಕುಟುಂಬದ ಮಹಿಳೆಯರನ್ನು ನಿಂದಿಸಿದ ವ್ಯಕ್ತಿಯನ್ನು ಎದುರು ಹಾಕಿಕೊಂಡ ಬಳಿಕ ಜುಬೇರ್ ಅವರಿಗೆ ಈ ಬೆದರಿಕೆಗಳು ಬರಲು ಆರಂಭವಾಗಿವೆ.

ಇನ್ನೊಂದೆಡೆ, ಸುಪ್ರೀಂ ಕೋರ್ಟ್‌ನ ವಕೀಲ ಶಶಾಂಕ್ ಶೇಖರ್ ಝಾ ಅವರು ”ತಾನು ಜುಬೇರ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಟ್ಟೀಟ್ ಮಾಡಿದ್ದಾರೆ.

ಜುಬೈರ್ ವಿರುದ್ಧ ಬೆದರಿಕೆ ಹಾಕಿದವರಲ್ಲಿ ಬಲಪಂಥೀಯ ಅಂಕಣಕಾರ ಹರ್ಷಿಲ್ ಮೆಹ್ತಾ ಮತ್ತು ಮಾಜಿ ಒಪಿಂಡಿಯಾ ಸಂಪಾದಕ ಅಜೀತ್ ಭಾರ್ತಿ ಸೇರಿದ್ದಾರೆ.

”ಈ ಬಾರಿ ಅವರು (ಜುಬೈರ್) ಸಂಪೂರ್ಣವಾಗಿ ಸುನ್ನತಿಯಾಗುತ್ತಾರೆ, ಅವರಿಗೆ ಮೂತ್ರ ವಿಸರ್ಜನೆಗೆ ಪೈಪ್ ಅಗತ್ಯವಿದೆ” ಎಂದು ಅಜೀತ್ ಭಾರ್ತಿ ಟ್ವೀಟ್ ಮಾಡಿದ್ದಾರೆ. ಕೆಲವು ಬಳಕೆದಾರರು ಒಂಟಿ ತೋಳದ ದಾಳಿಗಳನ್ನು ಮತ್ತು “ಅಖ್ಲಾಕ್” ನಂತೆ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ. 2015ರಲ್ಲಿ ಉತ್ತರ ಪ್ರದೇಶದ ದಾದ್ರಿ ಜಿಲ್ಲೆಯಲ್ಲಿ ದನದ ಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಮೊಹಮ್ಮದ್ ಅಖ್ಲಾಕ್ ಅವರನ್ನು ಗುಂಪೊಂದು ಹೊಡೆದು ಕೊಂದಿತ್ತು.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಈ ಬಗ್ಗೆ ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಪ್ರತೀಕ್ ಸಿನ್ಹಾ ಪ್ರತಿಕ್ರಿಯಿಸಿದ್ದು, ”ಇನ್ನೂ ನಾವು ನಮ್ಮ ವಕೀಲರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಸರಿಯಾದ ಕಾನೂನು ಕ್ರಮವನ್ನು ಕಂಡುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

”ಈ ಹಿಂದೆ, ನನಗೆ ನಿಂದನೆಯ ಸುರಿಮಳೆ ಬಂದಾಗ ಅವುಗಳನ್ನು ನಿರ್ಲಕ್ಷಿಸಿ, ನಕ್ಕು ಸುಮ್ಮನಾಗುತ್ತಿದ್ದೆ. ಆದರೆ ಇತ್ತಿಚೆಗೆ ತಮಿಳುನಾಡಿಗೆ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ಕೊಲೆ ದಾಳಿ ನಡೆದಿವೆ ಎನ್ನುವ ಸುಳ್ಳು ಸುದ್ದಿಯನ್ನು ಭೇದಿಸಿದ ಮೇಲೆ ನಿರಂತರವಾಗಿ “ದೈಹಿಕವಾಗಿ ಹಾನಿ ಮಾಡುವ ಮತ್ತು ನನ್ನನ್ನು ಮುಗಿಸುವ” ಕುರಿತಾದ ಟ್ವೀಟ್‌ಗಳೇ ಹೆಚ್ಚಾಗಿವೆ. ಈ ಹಿಂದೆ ತಮಿಳುನಾಡಿನಿಂದ ಬೆದರಿಕೆಗಳು ಬಂದಿದ್ದವು, ಆದರೆ ಈ ಬಾರಿ ಬೆದರಿಕೆಗಳು ಹೆಚ್ಚು ಸ್ಪಷ್ಟವಾಗಿವೆ” ಎಂದು ಜುಬೈರ್ ದಿ ವೈರ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ”ಯಾವುದೇ ಜೀವ ಬೆದರಿಕೆ ಇರುವ ಬಗ್ಗೆ ನಮಗೆ ತಿಳಿದಿಲ್ಲ, ಅಂತಹ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಒಂದುವೇಳೆ ಜುಬೈರ್ ನಮ್ಮನ್ನು ಸಂಪರ್ಕಿಸಿದರೆ, ಪ್ರಕರಣದ ಆಧಾರದ ಮೇಲೆ ಭದ್ರತೆಯನ್ನು ನೀಡಲು ನಾವು ಪರಿಗಣಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲ ವಾರಗಳಿಂದ ಬಲಪಂಥೀಯ ಸಾಮಾಜಿಕ ಮಾಧ್ಯಮ ಪುಟಗಳು, ಬಿಜೆಪಿ ನಾಯಕರು ಮತ್ತು ಕೆಲವು ಮುಖ್ಯವಾಹಿನಿಯ ಸುದ್ದಿ ವಾಹಿನಿಗಳು, ಬಿಹಾರದಿಂದ ವಲಸೆ ಬಂದಿರುವ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಹತ್ಯೆ ಮಾಡಲಾಗುತ್ತಿದೆ ಎಂದು ತಪ್ಪಾಗಿ ಹೇಳಿದ್ದರು. ಕೆಲವು ನಕಲಿ ವಿಡಿಯೋಗಳನ್ನು ಹಂಚಿಕೊಳ್ಳಲಾಗಿತ್ತು.

ಆದರೆ, ಈ ಸುಳ್ಳು ಸುದ್ದಿಯನ್ನು ಭೇದಿಸಿದ  ಸತ್ಯ-ಪರೀಕ್ಷಕ (ಫ್ಯಾಕ್ಟ್‌ ಚೆಕ್ಕರ್) ಜುಬೈರ್ ಅವರು, ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಸುದ್ದಿ ಮತ್ತು ಈ ಸುಳ್ಳು ಸುದ್ದಿ ಜೊತೆಗೆ ಹರಿದಾಡುತ್ತಿರುವ ವೀಡಿಯೊಗಳಿಗೂ ಸಂಬಂಧವಿಲ್ಲ ಎಂದು ವರದಿ ಮಾಡಿದ್ದರು.

ಇದೀಗ ಸುಳ್ಳು ಸುದ್ದಿ ಪ್ರಚಾರ ಮಾಡಿದ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಪ್ರಶಾಂತ್ ಉಮ್ರಾವ್, ಹಿಂದಿ ಪತ್ರಿಕೆ ದೈನಿಕ್ ಭಾಸ್ಕರ್, ಬಲಪಂಥೀಯ ವೆಬ್‌ಸೈಟ್ ಆಪ್ಇಂಡಿಯಾದ ಸಂಪಾದಕ ನೂಪುರ್ ಶರ್ಮಾ ಮತ್ತು ಸಿಇಒ ರಾಹುಲ್ ರೌಶನ್ ಮತ್ತು ಕೆಲವು ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...