Homeಮುಖಪುಟಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಬಂಧನಕ್ಕೂ ಮುನ್ನ ಪತ್ರಕರ್ತ ಮಂದೀಪ್ ಪುನಿಯಾ ’ಬಿಜೆಪಿಯು ದೆಹಲಿ ಪೊಲೀಸರೊಂದಿಗೆ ಸೇರಿಕೊಂಡು ಹಿಂಸಾಚಾರ ನಡೆಸಲು ಸಿದ್ದತೆ ನಡೆಸಿದೆ ಎಂದು ಆರೋಪಿಸಿದ್ದರು. ಇದರ ಕುರಿತು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸತ್ಯಕ್ಕೆ ಹೆದರುವವರು ನಿಜವಾದ ಪತ್ರಕರ್ತರನ್ನು ಬಂಧಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದೇ ರೀತಿಯಲ್ಲಿ ಧರ್ಮೇಂಧರ್ ಸಿಂಗ್ ಎಂಬುವವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದು ಆ ನಂತರ ಆತ ತನ್ನ ಗುರುತಿನ ಚೀಟಿ ತೋರಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸಿಂಘು ಗಡಿಯಲ್ಲಿ ದೆಹಲಿಯ ಭಾಗಕ್ಕೆ ಬರುವ ಮತ್ತು ಕೆಲವೇ ಸಾವಿರ ಸಂಖ್ಯೆಯಲ್ಲಿರುವ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರು ಪ್ರತಿಭಟನೆ ನಡೆಸುವ ಸ್ಥಳಕ್ಕೆ 50-60 ಜನರ ಗುಂಪೊಂದು ಘೋಷಣೆ ಕೂಗುತ್ತಾ ಬಂದಿತು. 5000-6000 ಸಂಖ್ಯೆಯಲ್ಲಿ ಪೊಲೀಸರು ನೆರೆದಿದ್ದರೂ ಅವರು ಪ್ರತಿಭಟನಾಕಾರರನ್ನು ಒಳಕೆ ಬಿಟ್ಟರು. ನಂತರ ಅವರು ರೈತರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಮುಖ ಪ್ರೇಕ್ಷಕರಾಗಿದ್ದರು ಎಂದು ಮಂದೀಪ್ ಪುನಿಯಾ ಆರೋಪಿಸಿದ್ದರು.

ಈ ಕಾರಣಕ್ಕಾಗಿಯೇ ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಿಂಘು ಗಡಿಯಲ್ಲಿನ ಸ್ಟೇಷನ್ ಹೌಸ್ ಆಫೀಸರ್ ಜೊತೆ ಪತ್ರಕರ್ತ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಯುಂಟುಮಾಡುವುದು), 332 (ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡುವುದು) ಅಡಿಯಲ್ಲಿ ಮಂದೀಪ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾವು ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕಾರವಾನ್ ನಿಯತಕಾಲಿಕೆಯ ರಾಜಕೀಯ ಸಂಪಾದಕ ಹರ್ತೋಶ್ ಸಿಂಗ್ ಬಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...