Homeಮುಖಪುಟಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಪತ್ರಕರ್ತರ ಬಂಧನ: ದೆಹಲಿ ಪೊಲೀಸರ ವಿರುದ್ಧ ಭುಗಿಲೆದ್ದ ಪ್ರತಿಭಟನೆ

ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಸಿಂಘು ಗಡಿಯಲ್ಲಿ ವರದಿ ಮಾಡುತ್ತಿದ್ದ ಮಂದೀಪ್ ಪೂನಿಯಾ ಮತ್ತು ಧರ್ಮೇಂಧರ್ ಸಿಂಗ್ ಎಂಬ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವುದರ ವಿರುದ್ಧ ರೈತರು ಮತ್ತು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾನ್ ಪತ್ರಿಕೆಯ ವರದಿಗಾರ ಮಂದೀಪ್ ಪೂನಿಯಾರವರನ್ನು ಪೊಲೀಸರು ಹಲ್ಲೆ ನಡೆಸಿ ಬಂಧಿಸಿದ್ದಾರೆ. ಅವರು ಬಿಜೆಪಿ ಮತ್ತು ಪೊಲೀಸರ ನಡುವಿನ ಒಳ ಒಪ್ಪಂದಗಳನ್ನು ಫೇಸ್‌ಬುಕ್ ಲೈವ್ ನಲ್ಲಿ ವಿವರಿಸುತ್ತಿದ್ದರು. ದೆಹಲಿ ಪೊಲೀಸರ ಕಾನೂನುಬಾಹಿರ ಚಟುವಟಿಕೆಗಳನ್ನು ವರದಿ ಮಾಡುತ್ತಿದ್ದರು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಬಂಧನಕ್ಕೂ ಮುನ್ನ ಪತ್ರಕರ್ತ ಮಂದೀಪ್ ಪುನಿಯಾ ’ಬಿಜೆಪಿಯು ದೆಹಲಿ ಪೊಲೀಸರೊಂದಿಗೆ ಸೇರಿಕೊಂಡು ಹಿಂಸಾಚಾರ ನಡೆಸಲು ಸಿದ್ದತೆ ನಡೆಸಿದೆ ಎಂದು ಆರೋಪಿಸಿದ್ದರು. ಇದರ ಕುರಿತು ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನಗಳನ್ನು ವಿರೋಧಿಸಿ ದೆಹಲಿ ಪೊಲೀಸ್ ಮುಖ್ಯ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸತ್ಯಕ್ಕೆ ಹೆದರುವವರು ನಿಜವಾದ ಪತ್ರಕರ್ತರನ್ನು ಬಂಧಿಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದೇ ರೀತಿಯಲ್ಲಿ ಧರ್ಮೇಂಧರ್ ಸಿಂಗ್ ಎಂಬುವವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದು ಆ ನಂತರ ಆತ ತನ್ನ ಗುರುತಿನ ಚೀಟಿ ತೋರಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ಸಿಂಘು ಗಡಿಯಲ್ಲಿ ದೆಹಲಿಯ ಭಾಗಕ್ಕೆ ಬರುವ ಮತ್ತು ಕೆಲವೇ ಸಾವಿರ ಸಂಖ್ಯೆಯಲ್ಲಿರುವ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರು ಪ್ರತಿಭಟನೆ ನಡೆಸುವ ಸ್ಥಳಕ್ಕೆ 50-60 ಜನರ ಗುಂಪೊಂದು ಘೋಷಣೆ ಕೂಗುತ್ತಾ ಬಂದಿತು. 5000-6000 ಸಂಖ್ಯೆಯಲ್ಲಿ ಪೊಲೀಸರು ನೆರೆದಿದ್ದರೂ ಅವರು ಪ್ರತಿಭಟನಾಕಾರರನ್ನು ಒಳಕೆ ಬಿಟ್ಟರು. ನಂತರ ಅವರು ರೈತರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಮುಖ ಪ್ರೇಕ್ಷಕರಾಗಿದ್ದರು ಎಂದು ಮಂದೀಪ್ ಪುನಿಯಾ ಆರೋಪಿಸಿದ್ದರು.

ಈ ಕಾರಣಕ್ಕಾಗಿಯೇ ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಿಂಘು ಗಡಿಯಲ್ಲಿನ ಸ್ಟೇಷನ್ ಹೌಸ್ ಆಫೀಸರ್ ಜೊತೆ ಪತ್ರಕರ್ತ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸೆಕ್ಷನ್ 186 (ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಯುಂಟುಮಾಡುವುದು), 332 (ಸಾರ್ವಜನಿಕ ಸೇವಕನನ್ನು ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ನೋವನ್ನುಂಟು ಮಾಡುವುದು) ಅಡಿಯಲ್ಲಿ ಮಂದೀಪ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ನಾವು ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕಾರವಾನ್ ನಿಯತಕಾಲಿಕೆಯ ರಾಜಕೀಯ ಸಂಪಾದಕ ಹರ್ತೋಶ್ ಸಿಂಗ್ ಬಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...